Home ಟಾಪ್ ಸುದ್ದಿಗಳು ದೇಶಕ್ಕಾಗಿ ಪ್ರಾಣವನ್ನೂ ಕೊಡಬಲ್ಲೆ: ಕೇಜ್ರಿವಾಲ್

ದೇಶಕ್ಕಾಗಿ ಪ್ರಾಣವನ್ನೂ ಕೊಡಬಲ್ಲೆ: ಕೇಜ್ರಿವಾಲ್

ನವದೆಹಲಿ: ದೇಶಕ್ಕಾಗಿ ತನ್ನ ಪ್ರಾಣವನ್ನೂ ಕೊಡಬಲ್ಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಬಿಜೆಪಿ ಹಾಗೂ ಸಂಘಪರಿವಾರ ಬೆಂಬಲಿತ ಪ್ರತಿಭಟನಾಕಾರರು ತಮ್ಮ ಮನೆ ಮೇಲೆ ದಾಳಿ ನಡೆಸಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ದೇಶದ ಅತಿ ದೊಡ್ಡ ಪಕ್ಷ ಇಂತಹ ಗೂಂಡಾಗಿರಿ ನಡೆಸಿದರೆ, ಜನರಿಗೆ ಕೆಟ್ಟ ಸಂದೇಶ ರವಾನೆಯಾಗುತ್ತದೆ. ಜನರು ಇದೇ ಸರಿಯಾದ ಮಾರ್ಗ ಎಂದು ಭಾವಿಸುತ್ತಾರೆ. ದೇಶ ಈ ರೀತಿ ಪ್ರಗತಿ ಹೊಂದಲು ಸಾಧ್ಯವಿಲ್ಲ. ಅರವಿಂದ್‌ ಕೇಜ್ರಿವಾಲ್‌ ಮುಖ್ಯವಲ್ಲ, ಆದರೆ ದೇಶ ಮುಖ್ಯ. ನನ್ನ ದೇಶಕ್ಕಾಗಿ ಪ್ರಾಣವನ್ನೂ ತೆರಬಲ್ಲೆ ಎಂದು ಹೇಳಿದ್ದಾರೆ.

Join Whatsapp
Exit mobile version