ನಾನು ಇನ್ನು ಮುಂದೆ ಕಣ್ಣೀರು ಹಾಕೋದಿಲ್ಲ ಎಂದು ನಿರ್ಧರಿಸಿದ್ದೇನೆ: ಕುಮಾರಸ್ವಾಮಿ

Prasthutha|

ಮಂಡ್ಯ: ನಾನು ಇನ್ನು ಮುಂದೆ ಕಣ್ಣೀರು ಹಾಕೋದಿಲ್ಲ ಎಂದು ನಿರ್ಧರಿಸಿದ್ದೇನೆ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿಗೌಡ ಪರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಇನ್ಮುಂದೆ ಕಣ್ಣಲ್ಲಿ ನೀರು ಹಾಕೋದೇ ಬೇಡ ಎಂದು ನಿರ್ಧರಿಸಿದ್ದೇನೆ. ನಾನು ಕಟುಕ ಹೃದಯ ಹೊಂದಿಲ್ಲ. ಜನರ ಕಷ್ಟ, ಅನುಕಂಪ, ಭಾವನಾತ್ಮಕ ವಿಚಾರ ನೋಡಿದಾಗ ನಮ್ಮ ಹೃದಯ ಮಿಡಿಯುತ್ತೆ.

ನಾನು ಸಿಎಂ ಆಗಿದ್ದಾಗ ಕನಗನಮರಡಿ ಬಸ್ ದುರಂತ ನಡೆಯಿತು. ಅದನ್ನ ನೋಡಿ ನಾನು ಕಣ್ಣಲ್ಲಿ ನೀರು ಹಾಕಿದ್ದೆ. ಕೆಲವರು ಟವಲ್ ನಲ್ಲಿ ಗ್ಲಿಸರಿನ್ ಹಾಕೊಂಡು ಅಳುತ್ತಾರೆ ಎಂದು ಆರೋಪಿಸಿದ್ದರು ಎಂದರು.

Join Whatsapp