ನಾನು ಓಡಿ ಹೋಗಿಲ್ಲ, ಸತ್ತೂ ಇಲ್ಲ: ಸಮಾಧಿ ಸ್ಥಿತಿಯಲ್ಲಿದ್ದೇನೆ | ಫೇಸ್‌ಬುಕ್‌ನಲ್ಲಿ ನಿತ್ಯಾನಂದ ಸಂದೇಶ

Prasthutha|

ರಾಮನಗರ: ಅತ್ಯಾಚಾರ ಪ್ರಕರಣದ ಆರೋಪದೊಂದಿಗೆ ದೇಶ ಬಿಟ್ಟು ಪರಾರಿಯಾದ  ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀ ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ನಿರಂತರ ಧ್ಯಾನದಲ್ಲಿ ನಿರತರಾಗಿದ್ದೇನೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ.

- Advertisement -

ಕೈಲಾಸ ಪೀಠ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದನ ಸಂದೇಶಗಳನ್ನು ಬರೆಯಲಾಗಿದೆ. ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂದಿರುಗುತ್ತೇನೆ’ ಎಂದು ಬರೆದಿದ್ದಾರೆ.

ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದು ಅದೆಲ್ಲ ಸುಳ್ಳು. ನಾನು ಸತ್ತು ಹೋಗಿಲ್ಲ. ಎಲ್ಲಿಯೂ ಓಡಿ ಹೋಗಿಲ್ಲ. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು-ಆಹಾರ ಸ್ವೀಕರಿಸುತ್ತಿಲ್ಲ’ ಎಂದೂ ನಿತ್ಯಾನಂದ ಘೋಷಿಸಿದ್ದಾನೆ

Join Whatsapp