ನನಗೆ ಕಾಂಗ್ರೆಸ್​ನಿಂದ ಯಾವುದೇ ಆಹ್ವಾನ ಬಂದಿಲ್ಲ: ಮಾಜಿ ಸಚಿವ ಮುನೇನಕೊಪ್ಪ ಸ್ಪಷ್ಟನೆ

Prasthutha|

ಹುಬ್ಬಳ್ಳಿ: ನನಗೆ ಈವರೆಗೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬೇಕೆಂಬ ಆಹ್ವಾನ ಕಾಂಗ್ರೆಸ್ ಮುಖಂಡರಿಂದ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ.

- Advertisement -

ಕಳೆದ ಕಲವು ದಿನಗಳಿಂದ ಶಂಕರ ಪಾಟೀಲ ಮುನೇನಕೊಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ”ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹಿತರು ಇದ್ದಾರೆ, ಬಂಧುಗಳು ಇದ್ದಾರೆ. ಆದರೆ, ಈವರೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಗದೀಶ್ ಶೆಟ್ಟರ್ ಸೇರಿದಂತೆ ಯಾವೊಬ್ಬ ನಾಯಕರು ನನ್ನೊಂದಿಗೆ ಮಾತನಾಡಿಲ್ಲ. ಹೀಗಾಗಿ ಬಿಜೆಪಿ ತೊರೆಯುವ ಮಾತಿಲ್ಲ” ಎಂದರು



Join Whatsapp