ಸಂಸದೆ ಸುಮಲತಾರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ: ಕುಮಾರಸ್ವಾಮಿ

Prasthutha|

ಹಾಸನ: ಮಂಡ್ಯ ಸಂಸದೆ ಸುಮಲತಾರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇನು ಅಚ್ಚರಿಯಾದ ಸುದ್ದಿ ಅಲ್ವಲ್ಲ. ಈ ವಿಷಯ ಯಾರಿಗೇನು ಅಚ್ಚರಿ ಮೂಡಿಸುವ ಸುದ್ದಿ ಅಲ್ಲ. ಅವರು ಏನು ಮಾತನಾಡಿದ್ದಾರೆ ಅದಕ್ಕೆ ರಿಯಾಕ್ಷನ್ ಕೊಡೋದು ಸೂಕ್ತ ಅಲ್ಲ ಅನ್ನೋದು ನನ್ನ ಅಭಿಪ್ರಾಯ. ಮಂಡ್ಯ ಜಿಲ್ಲೆಯ ಜನತೆ ತೀರ್ಮಾನ ಮಾಡಿಕೊಳ್ಳುತ್ತಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದರು.


ಅವರು ದೊಡ್ಡಮಟ್ಟಕ್ಕೆ ಬೆಳೆದಿರುವವರು. ದೊಡ್ಡ ಪಕ್ಷಕ್ಕೆ ಸೇರುತ್ತಿದ್ದಾರೆ. ನಾನೊಬ್ಬ ಸಣ್ಣವನು. ಅವರ ಬಗ್ಗೆ ಮಾತನಾಡಲು ಸಾಧ್ಯವಾ? ಆದ್ದರಿಂದ ಅದರ ಮಾತನಾಡುವ ಅವಶ್ಯಕತೆ ನನಗಿಲ್ಲ ಎಂದು ಹೇಳಿದ್ದಾರೆ.

Join Whatsapp