ನೇಹಾ ತಂದೆ-ತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಜಿ ಪರಮೇಶ್ವರ್

Prasthutha|

ಬೆಂಗಳೂರು: ಅವರು ತನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

- Advertisement -


ನಗರದಲ್ಲಿ ಮಾಧ್ಯ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.


ಎಬಿವಿಪಿಯವರು ತಮ್ಮ ನಿವಾಸಕ್ಕೆ ಮುತ್ತಿಗೆ ಹಾಕುವ ವಿಷಯದಲ್ಲಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಅವರು ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ತಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ, ತನಗಿದ್ದ ಮಾಹಿತಿಯನ್ನು ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದು, ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.

Join Whatsapp