ನಮ್ಮ ಬೆಂಬಲಿಗರ ಮೇಲೆ ಐಟಿ ಇಲಾಖೆ ದಾಳಿ ನಡೆಸುತ್ತಿದೆ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕನಕಪುರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿರುವ ಐಟಿ ಇಲಾಖೆ ಅಧಿಕಾರಿಗಳು ನಮ್ಮ ಬೆಂಬಲಿಗರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಡಿ ಕೆ ಶಿವಕುಮಾರ್ ಹೇಳಿದರು.

- Advertisement -


ಬೆಂಗಳೂರಿನ ಪ್ರೆಸ್ ಕ್ಲಬ್ ಆಯೋಜಿಸಿದ್ದ ಪತ್ರಕರ್ತರ ಸಂವಾದದಲ್ಲಿ ಮಾತನಾಡಿ ಅವರು, ಐಟಿ ಅಧಿಕಾರಿಗಳು ನನ್ನ ಮತ್ತು ನನ್ನ ಬೆಂಬಲಿಗರ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ. ಬಿಜೆಪಿ ಮತ್ತು ಎನ್ಡಿಎ ನಾಯಕರ ಮೇಲೇಕೆ ದಾಳಿ ನಡೆಸುತ್ತಿಲ್ಲ? ನಮಗೆ ಕಿರುಕುಳ ನೀಡಲು ಬಯಸುವ ಮೇಲಧಿಕಾರಿಗಳ ಸೂಚನೆಯಂತೆ ಐಟಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆಂದು ಹೇಳಿದರು.

Join Whatsapp