ಈ ಬಾರಿ ಕಾಂಗ್ರೆಸ್’ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ: ವೀಣಾ ಕಾಶಪ್ಪನವರ

Prasthutha|

ಬಾಗಲಕೋಟೆ: ನಾನು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಕೆಲವೇ ಮತಗಳ ಅಂತರದಲ್ಲಿ ಸೋತಿರುವುದರಿಂದ ಮತ್ತೆ ಹೈಕಮಾಂಡ್, ರಾಜ್ಯ ಮತ್ತು ಜಿಲ್ಲಾ ನಾಯಕರು ನನ್ನ ಸ್ಪರ್ಧೆಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ಭರವಸೆ ಇದೆ ಎಂದರು.


ಚುನಾವಣೆ ಕೆಲಸ ಪ್ರಾರಂಭಿಸಿದ್ದೇನೆ. ಜಿಲ್ಲೆಯ ಪ್ರತಿಯೊಂದು ಹಳ್ಳಿಯಲ್ಲೂ ಸಂಚಾರ ಮಾಡಿದ್ದೇನೆ. ನನಗೆ ಅಧಿಕಾರ ಮುಖ್ಯ ಅಲ್ಲ, ಜನಸೇವೆ ಮುಖ್ಯ ಎಂದು ಹೇಳಿದರು.



Join Whatsapp