Home ಟಾಪ್ ಸುದ್ದಿಗಳು ಮಹಾಘಟಬಂಧನ್ ಶಕ್ತಿಪ್ರದರ್ಶನ | ಊಟಕ್ಕೆ ಕರೆದಿದ್ದರು ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ

ಮಹಾಘಟಬಂಧನ್ ಶಕ್ತಿಪ್ರದರ್ಶನ | ಊಟಕ್ಕೆ ಕರೆದಿದ್ದರು ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ

ಬೆಂಗಳೂರು: ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ಶಕ್ತಿಪ್ರದರ್ಶನ ನಡೆಯಿತು. ಕಲಾಪದಲ್ಲಿ ಬಜೆಟ್ ಮೇಲೆ ಚರ್ಚೆ ನಡೆಸುವಾಗ ಮಹಾಘಟಬಂಧನ್ ನಾಯಕರ ಡಿನ್ನರ್ ಪಾರ್ಟಿಗೆ ಹೋಗಿದ್ದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಪ್ರಶ್ನೆಗೆ ಉತ್ತರಿಸಿದ ಸಭಾಧ್ಯಕ್ಷ ಯು.ಟಿ ಖಾದರ್ ನಾನೂ ಕೂಡ ಮನುಷ್ಯ, ನೀವು ಕರೆದರೂ ಊಟಕ್ಕೆ ಬರುತ್ತೇನೆ ಎಂದರು. ಮುಖ್ಯಮಂತ್ರಿಯವರು ನಿನ್ನೆ ರಾತ್ರಿ ಔತಣಕೂಟಕ್ಕೆ ಕರೆದಿದ್ದರು. ಆದ್ದರಿಂದ ವೆಸ್ಟ್ ಎಂಡ್ ಹೊಟೇಲ್ ಗೆ ಹೋಗಿದ್ದೆ. ಅದರಲ್ಲಿ ಶಿಷ್ಟಾಚಾರ ಉಲ್ಲಂಘನೆ ಪ್ರಶ್ನೆ ಇಲ್ಲ’ ಎಂದು ಯು.ಟಿ.ಖಾದರ್ ತಿಳಿಸಿದರು.


ವೆಸ್ಟ್ಎಂಡ್ ಹೊಟೇಲ್ ನಲ್ಲಿ ಸೋನಿಯಾಗಾಂಧಿಯವರನ್ನು ಭೇಟಿ ಮಾಡಿದ್ದೀರಿ ಎಂದು ಪತ್ರಿಕೆಗಳಲ್ಲಿ ಬಂದಿದೆ. ನೀವು ಸಭಾಧ್ಯಕ್ಷರು ಸ್ಥಾನದಲ್ಲಿ ಕುಳಿತ ಬಳಿಕ ಪಕ್ಷಾತೀತರಾಗುತ್ತೀರಿ. ಯಾವುದೇ ಪಕ್ಷದ ಹಂಗಿಗೂ ಒಳಗಾಗಬಾರದು. ಆ ರೀತಿ ಭೇಟಿ ಮಾಡುವುದು ಸರಿಯಲ್ಲ ಎಂದು ಜ್ಞಾನೇಂದ್ರ ಹೇಳಿದರು.

Join Whatsapp
Exit mobile version