ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೊ ಅಂಟಿಸಿದ್ದು ನಾನೇ ಎಂದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ

Prasthutha|

ವಿಜಯಪುರ: ಕಾಂಗ್ರೆಸ್ ಕಚೇರಿ ಗೋಡೆ ಮೇಲೆ ಸಾವರ್ಕರ್ ಫೋಟೊ ಅಂಟಿಸಿರುವುದು ನಾನೇ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಹೇಳಿದ್ದಾನೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಪದೇ ಪದೇ ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಹೇಳಿಕೆ ನೀಡುವ ಮೂಲಕ ಅವಮಾನ ಮಾಡುತ್ತಿದ್ದಾರೆ. ಅಲ್ಲದೆ, ಸಾವರ್ಕರ್ ಫೋಟೊ ಸುಟ್ಟು ಹಾಕಿದ್ದಾರೆ.ಇದನ್ನು ಖಂಡಿಸಿ ಕಾಂಗ್ರೆಸ್ ಕಚೇರಿ ಮೇಲೆ ಫೋಟೊ ಅಂಟಿಸಿದ್ದೇನೆ ಎಂದಿದ್ದಾನೆ.



Join Whatsapp