ಕಾರ್ಯಕ್ರಮಕ್ಕೆ ಸೇರದ ಜನಸ್ತೋಮ: ಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆ ಎಂದ ಪ್ರಧಾನಿ ಮೋದಿ

Prasthutha|

- Advertisement -

ಮಂಗಳೂರು: ಇಂದು ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮ ನಿರೀಕ್ಷಿಸಿದಷ್ಟು ಯಶಸ್ವಿಯಾಗಿಲ್ಲ. ಇದರಿಂದ ರಾಜ್ಯ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಪ್ರಧಾನಿ ಸಮಾವೇಶದಲ್ಲಿ ಕನಿಷ್ಠ 1 ಲಕ್ಷ ಜನರು ಸೇರುವ ನಿರೀಕ್ಷೆ ಇತ್ತು, ಆದರೆ ಅದರ ಅರ್ಧದಷ್ಟು ಸೇರಿದ್ದರಿಂದ ಭಾರಿ ನಿರೀಕ್ಷೆಯ ಕಾರ್ಯಕ್ರಮ ಯಶಸ್ವಿಯಾಗಲಿಲ್ಲ. ಮೋದಿ ಸಮಾವೇಶದಲ್ಲಿ ಸುಮಾರು 50 ಸಾವಿರ ಜನರು ಭಾಗಿಯಾಗಿದ್ದರು.

ಪ್ರಧಾನಿ ಮೋದಿಯವರು 3,700 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದರು. ಸಮಾವೇಶದ ಅಂಗವಾಗಿ ಮಂಗಳೂರಿಗೆ ಬಂದಿದ್ದ ಅನೇಕ ಪ್ರಭಾವೀ ನಾಯಕರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಸಂಜೆಯ ವೇಳೆಗೆ ಪ್ರಧಾನಿ ಮೋದಿ ದೆಹಲಿಗೆ ವಾಪಸಾದರು. ವಾಪಸಾಗುವ ಮುನ್ನ ಮಂಗಳೂರಿನ ಎನ್ಎಂಪಿಎ ಹೆಲಿಪ್ಯಾಡ್ ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದರು.

- Advertisement -

ಕೋರ್ ಕಮಿಟಿ ಸಭೆಯಲ್ಲಿ ಕರ್ನಾಟಕ ಬಿಜೆಪಿ ನಾಯಕರ ಜೊತೆ ಆಪ್ತ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಇನ್ನು ಮುಂದೆ ಪ್ರತಿ ತಿಂಗಳೂ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದು ಪಕ್ಷದ ನಾಯಕರುಗಳಿಗೆ ತಿಳಿಸಿದ್ದಾರೆ.

Join Whatsapp