ಎಪ್ರಿಲ್‌ 12 ರಂದು 25 ಸಾವಿರ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ: ಈಶ್ವರಪ್ಪ

Prasthutha|

ಶಿವಮೊಗ್ಗ: ಶಿವಮೊಗ್ಗ ಲೋಕಸಭ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಪ್ರಿಲ್‌ 12 ರಂದು 25 ಸಾವಿರ ಕಾರ್ಯಕರ್ತರೊಂದಿಗೆ ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

- Advertisement -

ಇಂದು ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ನನ್ನ ಗುರುತು ಕೂಡ ಇನ್ನೂ ತೀರ್ಮಾನವಾಗಿಲ್ಲ. ಮತದಾನದ ದಿನಾಂಕ ನಿಗದಿಯಾಗಿದೆ. ಆದ್ದರಿಂದ ಏಪ್ರಿಲ್ 12ರಂದು ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವೆ ಎಂದ ಈಶ್ವರಪ್ಪ ಈ ರೀತಿ ಘೋಷಿಸಿದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ಎದೆಯಲ್ಲಿ ನಡುಕ ಆರಂಭವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ಇಳಿದಾಗಿದೆ ಎಂದು ಹೇಳಿದ್ದಾರೆ.

Join Whatsapp