ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ: ಕೇಂದ್ರ ಸಚಿವ ವಿ.ಕೆ. ಸಿಂಗ್

Prasthutha|

ಗಾಜಿಯಾಬಾದ್: ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ ಗಾಜಿಯಾಬಾದ್ ನ ಬಿಜೆಪಿ ಸಂಸದ ( ನಿವೃತ್ತ ಜನರಲ್) ವಿ.ಕೆ. ಸಿಂಗ್ ಹೇಳಿದ್ದಾರೆ.

- Advertisement -


ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಸೈನಿಕನಾಗಿ ನನ್ನ ಇಡೀ ಜೀವನವನ್ನು ದೇಶದ ಸೇವೆಗೆ ಮುಡಿಪಾಗಿಟ್ಟಿದ್ದೇನೆ. ಕಳೆದ 10 ವರ್ಷಗಳಿಂದ ಗಾಜಿಯಾಬಾದ್ ಅನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡುವ ಕನಸನ್ನು ನನಸಾಗಿಸಲು ಅವಿರತವಾಗಿ ಶ್ರಮಿಸಿದ್ದೇನೆ. ಗಾಜಿಯಾಬಾದ್ ಜನರು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಸಿಕ್ಕ ಪ್ರೀತಿ ಅಮೂಲ್ಯವಾಗಿದೆ. ಈ ಬಂಧ ಭಾವನಾತ್ಮಕವಾಗಿ ಬೆಳೆದುಕೊಂಡಿದೆ‘.


‘ನನಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲು ಬಹಳ ಕಷ್ಟವಾಯಿತು, ಆದರೆ ಹೊಸ ರೀತಿಯಲ್ಲಿ ದೇಶದ ಸೇವೆಗೆ ನನ್ನ ಜೀವನವನ್ನು ಸಮರ್ಪಿಸಿಕೊಳ್ಳಬೇಕೆಂಬ ನನ್ನ ಅಚಲ ಸಂಕಲ್ಪದಿಂದಾಗಿ ಈ ತೀರ್ಮಾನಕ್ಕೆ ಬಂದಿದ್ದೇನೆ‘. 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ವರಿಷ್ಠರಿಗೂ ಧನ್ಯವಾದ ತಿಳಿಸಿದ್ದಾರೆ.

Join Whatsapp