Home ಟಾಪ್ ಸುದ್ದಿಗಳು ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನು ಪ್ರತಿಭಟನೆ ಮಾಡುತ್ತೇನೆ: ಸಿಎಂ ಇಬ್ರಾಹಿಂ

ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನು ಪ್ರತಿಭಟನೆ ಮಾಡುತ್ತೇನೆ: ಸಿಎಂ ಇಬ್ರಾಹಿಂ

ಬೆಂಗಳೂರು: ಸುಪ್ರೀಂ ಕೋರ್ಟ್ ನ ತೀರ್ಪನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಕುಮಾರಸ್ವಾಮಿ, ಯಡಿಯೂರಪ್ಪ ವಿರುದ್ಧವು ಪ್ರಕರಣಗಳು ಇವೆ. ಅವರ ವಿರುದ್ಧ ಏಕೆ ಅನುಮತಿ ಕೊಟ್ಟಿಲ್ಲ? ನಿಷ್ಕಲಂಕ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನು ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಜಿಕ್ಯೂಷನ್ ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾವೇರಿಯಲ್ಲಿ ಇಬ್ರಾಹಿಂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಟಗರು ಇದ್ದಂತೆ. ಮೊದಲು ಸಿಎಂ ಜೊತೆಯಲ್ಲಿ ನಾನು ಇರಲಿಲ್ಲ. ಆದರೆ ಈಗ ಅವರ ಜೊತೆಯಲ್ಲಿ ಇರುತ್ತೇನೆ ಎಂದಿದ್ದಾರೆ.

ರಾಜ್ಯಪಾಲರು ಅವರ ಮನೆ ಕ್ಲರ್ಕ್ ಆ? ಅಮಿತ್ ಶಾ ಮನೆ ಮುಂದೆ ಹೋಗಿ ಅಪ್ಪ ಮಗ ಏಕೆ ಕೂತಿದ್ದರು? ಸುಪ್ರೀಂಕೋರ್ಟಿಗೆ ಹೋಗಿ ಅಂತ ಕುಮಾರಸ್ವಾಮಿ ಹೇಳುತ್ತಾರೆ. ರಾಜ್ಯಪಾಲರು ಟೀಜೆ ಅಬ್ರಹಾಂಗೂ ಇದೇ ರೀತಿ ಹೇಳಬೇಕಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರದು ನಿತ್ಯ ತೆಗೆದು ಇಡುತ್ತೇನೆ . ನಾನು ಹಳೆ ಭೂಕೈಲಾಸ ನಾಟಕ ಬರೆದವನು ಎಲ್ಲವೂ ಗೊತ್ತಿದೆ ಎಂದು ಸಿಎಂ ಇಬ್ರಾಹಿಂ ಹೇಳಿಕೆ ನೀಡಿದರು.

Join Whatsapp
Exit mobile version