ನಾನು ರಾಜೀನಾಮೆ ಕೊಡ್ತೀನಿ, ಸಿದ್ದರಾಮಯ್ಯನವರೂ ನೈತಿಕತೆ ಹೊತ್ತು ರಾಜೀನಾಮೆ ನೀಡಲಿ: ಆರ್.ಅಶೋಕ್

Prasthutha|

ಬೆಂಗಳೂರು: ನಾಲ್ಕು ಜನರು ಹೇಳಿದಂತೆ ಸಚಿವರಿಗೆ ಗೌರವ ಕೊಟ್ಟು ನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ. ಅದೇ ನೈತಿಕತೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆಯನ್ನ 4 ಜನ ಮಂತ್ರಿಗಳು ಪಡೆಯಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲ್ ಹಾಕಿದ್ದಾರೆ.

- Advertisement -


ನಿನ್ನೆ ಅಶೋಕ್ ವಿರುದ್ಧ ಭೂ ಅಕ್ರಮದ ಬಗ್ಗೆ ಪ್ರಸ್ತಾಪ ಮಾಡಿದ್ದ 4 ಜನ ಸಚಿವರಿಗೆ ತಿರುಗೇಟು ಕೊಟ್ಟ ಅಶೋಕ್, ಸಚಿವರಿಗೆ ನಾನು ಕೊಟ್ಟಿರೋ ಸವಾಲನ್ನ 24 ಗಂಟೆ ಒಳಗೆ ಸ್ವೀಕಾರ ಮಾಡಲಿ ಎಂದು ಸವಾಲ್ ಹಾಕಿದರು.


ಲೊಟ್ಟೆಗೊಲ್ಲಹಳ್ಳಿ ಭೂಮಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮತ್ತು ಹೈಕೋರ್ಟ್ ನಲ್ಲಿ ನನ್ನ ಪರ ತೀರ್ಪು ಕೊಟ್ಟಿದೆ. ಸಿದ್ದರಾಮಯ್ಯ ರೀತಿ ತನಿಖೆಗೆ ಆದೇಶ ಮಾಡಿಲ್ಲ. ಹೀಗಿದ್ರೂ ದ್ವೇಷದ ರಾಜಕೀಯಕ್ಕಾಗಿ ನನ್ನ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ.



Join Whatsapp