ಮಂಡ್ಯದಲ್ಲಿ ಕಾಂಗ್ರೆಸ್ ಪರ ದರ್ಶನ್ ಪ್ರಚಾರ

Prasthutha|

ಮಂಡ್ಯ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಅವರು ಕ್ಯಾಂಪೇನ್ ಮಾಡುತ್ತಿದ್ದಾರೆ.

- Advertisement -


ಕ್ಯಾಂಪೇನ್ ಬಳಿಕ ಮಾತನಾಡಿದ ನಟ ದರ್ಶನ್, ‘ನಾನು ಪಕ್ಷದ ಪರ ಬರುವುದಿಲ್ಲ, ನಾನು ವ್ಯಕ್ತಿ ಪರ. ಐದು ವರ್ಷಗಳ ಹಿಂದೆ ನರೇಂದ್ರಣ್ಣ ಮಾಡಿದ ಸಹಾಯ ನೆನಪಿಸಿಕೊಳ್ಳುತ್ತೇನೆ’ ಎಂದು ಮಾತು ಆರಂಭಿಸಿದರು.


‘ಮಾಧ್ಯಮದವರು ಏನೇನೋ ಹಾಕಿದ್ರೆ ತುಂಬಾ ಕಷ್ಟ ಆಗುತ್ತದೆ. ಹೀಗಾಗಿ ನಾನು ಸ್ಪಷ್ಟನೆ ಕೊಡುತ್ತೇನೆ. ಸುಮಲತಾಗೆ ಮಂಡ್ಯ ಸೀಟ್ ಸಿಕ್ಕಿಲ್ಲ ಎಂದರೆ ನಮ್ಮ ಪರ ನೀವು ಪ್ರಚಾರ ಮಾಡಬೇಕು ಎಂದು ಉದಯ್ ಗೌಡ್ರು ಕೇಳಿದ್ದರು. ಮೊದಲು ಕರೆದರು ಎನ್ನುವ ಕಾರಣಕ್ಕೆ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ನಿಂದ ಸ್ಟಾರ್ ಚಂದ್ರು ನಿಂತಿದ್ದಾರೆ. ನಿಮ್ಮ ಅತ್ಯಮೂಲ್ಯ ಮತವನ್ನು ಅವರಿಗೆ ನೀಡಿ. ನರೇಂದ್ರ ಹಾಗೂ ಉದಯ್ ಅವರ ಕೈಗಳನ್ನು ಬಲಪಡಿಸಿ’ ಎಂದು ಕೋರಿದ್ದಾರೆ.

Join Whatsapp