ಇಡುಕ್ಕಿ: ಭೂಕುಸಿತದಲ್ಲಿ ಒಂದೇ ಕುಟುಂಬದ ಐವರು ಸಾವು

Prasthutha|

ತಿರುವನಂತಪುರಂ: ಕೇರಳದ ಹಲವು ಗುಡ್ಡಗಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇಡುಕ್ಕಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

- Advertisement -

ಜಿಲ್ಲೆಯ ತೊಡುಪುಝ ಪ್ರದೇಶದ ಕಂಜಾರ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, ಮನೆ ಕೊಚ್ಚಿಕೊಂಡು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಕ್ಷಣಾ ಪಡೆಯ ಕಾರ್ಯಕರ್ತರು ಮೃತದೇಹಗಳನ್ನು 500 ಮೀಟರ್‌ ದೂರದಲ್ಲಿ ಪತ್ತೆ ಮಾಡಿದ್ದಾರೆ.

ಮೃತರನ್ನು ಕಂಜರ್ ನಿವಾಸಿಗಳಾದ ತಂಗಮ್ಮ (80), ಸೋಮನ್ (52), ಶಾಜಿ (50), ಅವರ ಶಿಮಾ (30) ದೇವಾನಂದ್ (5) ಎಂದು ಗುರುತಿಸಲಾಗಿದೆ.

- Advertisement -

ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿತ್ತು.ಆದರೆ, ಈ ಮನೆ ಭೂಕುಸಿತಕ್ಕೆ ಒಳಗಾಗುವ ಪ್ರದೇಶದಲ್ಲಿ ಇರಲಿಲ್ಲ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಇಡುಕ್ಕಿ ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಮಾತನಾಡಿ, ಭೂಕುಸಿತ ಪೀಡಿತ ಪ್ರದೇಶಗಳಲ್ಲಿನ ಅನೇಕ ನಿವಾಸಿಗಳನ್ನು ತಕ್ಷಣವೇ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

Join Whatsapp