‘ಕೋವಿಡ್ ಸೋಂಕು ಕಡಿಮೆಯಾಗದಿದ್ದರೆ SSLC ಪರೀಕ್ಷೆ ಕೂಡ ರದ್ದು’: ಸಿಎಂ ಯಡಿಯೂರಪ್ಪ

Prasthutha|

ಬೆಳಗಾವಿ : ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ SSLC ವಾರ್ಷಿಕ ಪರೀಕ್ಷೆ ನಡೆಸಲಾಗುವುದು, ಇಲ್ಲದಿದ್ದರೆ ಪರೀಕ್ಷೆ ರದ್ದು ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

- Advertisement -

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರದ್ದು ಮಾಡಲಾಗಿದೆ. ಅದೇ ರೀತಿ ಪರಿಸ್ಥಿತಿ ನೋಡಿಕೊಂಡು SSLC ಪರೀಕ್ಷೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ ಸುರೇಶ್ ಕುಮಾರ್ ಜೊತೆ ಈ ಕುರಿತು ಚರ್ಚಿಸಿದ್ದೇನೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಮಾತ್ರ ಒಂದೆರಡು ದಿನಗಳಲ್ಲಿ ಪರೀಕ್ಷೆ ನಡೆಸಲಾಗುವುದು, ಮಕ್ಕಳ ಪೋಷಕರು ಗೊಂದಲ, ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.

Join Whatsapp