Home ಟಾಪ್ ಸುದ್ದಿಗಳು ‘ಕೋವಿಡ್ ಸೋಂಕು ಕಡಿಮೆಯಾಗದಿದ್ದರೆ SSLC ಪರೀಕ್ಷೆ ಕೂಡ ರದ್ದು’: ಸಿಎಂ ಯಡಿಯೂರಪ್ಪ

‘ಕೋವಿಡ್ ಸೋಂಕು ಕಡಿಮೆಯಾಗದಿದ್ದರೆ SSLC ಪರೀಕ್ಷೆ ಕೂಡ ರದ್ದು’: ಸಿಎಂ ಯಡಿಯೂರಪ್ಪ

ಬೆಳಗಾವಿ : ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ SSLC ವಾರ್ಷಿಕ ಪರೀಕ್ಷೆ ನಡೆಸಲಾಗುವುದು, ಇಲ್ಲದಿದ್ದರೆ ಪರೀಕ್ಷೆ ರದ್ದು ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರದ್ದು ಮಾಡಲಾಗಿದೆ. ಅದೇ ರೀತಿ ಪರಿಸ್ಥಿತಿ ನೋಡಿಕೊಂಡು SSLC ಪರೀಕ್ಷೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ ಸುರೇಶ್ ಕುಮಾರ್ ಜೊತೆ ಈ ಕುರಿತು ಚರ್ಚಿಸಿದ್ದೇನೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಮಾತ್ರ ಒಂದೆರಡು ದಿನಗಳಲ್ಲಿ ಪರೀಕ್ಷೆ ನಡೆಸಲಾಗುವುದು, ಮಕ್ಕಳ ಪೋಷಕರು ಗೊಂದಲ, ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.

Join Whatsapp
Exit mobile version