ದುಪ್ಪಟ್ಟಾವನ್ನು ತಲೆಯ ಸೆರಗಿನ ರೀತಿ ಧರಿಸಲು ಅವಕಾಶ ಕೊಟ್ಟರೆ ಸಮಸ್ಯೆ ಮುಗಿಯುತ್ತದೆ: ಎಚ್‌.ಡಿ.ಕೆ

Prasthutha|

ಬೆಂಗಳೂರು: ‘ಹಿಜಾಬ್‌ ಅಥವಾ ಬೇರೆ ಯಾವುದೇ ವಿಷಯಕ್ಕಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯವಾಗಿದ್ದು, ಇನ್ನಾದರೂ ಸರ್ಕಾರ ತಾಯಿ ಹೃದಯದಿಂದ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಉದಾತ್ತ ಹೆಜ್ಜೆ ಇಡಬೇಕು. ಮಕ್ಕಳ‌ ಹಾಲಿನಂತಹ ಮನಸ್ಸನ್ನು ಒಡೆಯಬಾರದು’ ಎಂದು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

- Advertisement -

ಮಹಾತ್ಮ ಗಾಂಧೀಜಿಯವರ ಧರ್ಮಪತ್ನಿ ಕಸ್ತೂರ್ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು ಎಂದು ಹಿಜಾಬ್‌ಗೆ ಬೆಂಬಲ ವ್ಯಕ್ತಪಡಿಸಿದರು.

ರಾಜಕೀಯ ಕಾರಣಕ್ಕೆ ಮುಂಚೂಣಿಗೆ ಬಂದ ಈ ಎಲ್ಲ ಅನಪೇಕ್ಷಿತ ವಿವಾದಗಳಲ್ಲಿ ಮಕ್ಕಳೇ ಬಲಿಪಶುಗಳಾಗುತ್ತಿದ್ದು, ಈ ವಿವಾದಗಳನ್ನು ಇನ್ನೂ ಜೀವಂತ ಇಡಲು ಕೆಲವರು ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ ಎಂದರು.

- Advertisement -

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಕ್ಕಳ ಮನಸ್ಸಿನಲ್ಲಿ ಯಾರೂ ದ್ವೇಷವನ್ನು ಬಿತ್ತಬಾರದು, ಮುಸ್ಲಿಂ ಮಕ್ಕಳಿಗೆ ದುಪ್ಪಟ್ಟಾವನ್ನು ತಲೆಯ ಸೆರಗಿನ ರೀತಿ ಧರಿಸಲು ಅವಕಾಶ ಕೊಟ್ಟರೆ ಸಮಸ್ಯೆ ಮುಗಿಯುತ್ತದೆ. ಆಗ ಸಮವಸ್ತ್ರ ಬಿಟ್ಟು ಬೇರೆ ವಸ್ತ್ರ ಧರಿಸುವ ಅವಶ್ಯಕತೆ ಇರುವುದಿಲ್ಲ. ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದರೆ ಸಮಸ್ಯೆ ಸುಲಭವಾಗಿ ಬಗೆಹರಿಯಲಿದೆ ಎಂದು ಅವರು ಹೇಳಿದರು.

Join Whatsapp