ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸದಿದ್ದರೆ ಜಲಸಮಾಧಿಯಾಗುವೆ: ಪರಮಹಂಸ್​ ದಾಸ್

Prasthutha|

ಅಯೋಧ್ಯಾ: ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸದಿದ್ದರೆ, ಅ.2ರಂದು ಜಲಸಮಾಧಿಯಾಗುವುದಾಗಿ ತಪಸ್ವಿ ಛಾವಣಿಯ ಉತ್ತರಾಧಿಕಾರಿ ಮಹಂತ್​ ಪರಮಹಂಸ್​ ದಾಸ್​ ಹೇಳಿದ್ದಾರೆ.

- Advertisement -

ಇಲ್ಲಿನ ನಾಗರಿಕರನ್ನು ರಕ್ಷಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವುದು ಬಹಳ ಮುಖ್ಯ. ಇನ್ನು ನಾನು ಸಂತರ ಸಂಪ್ರದಾಯವನ್ನು ಅನುಸರಿಸಿದ್ದೇನೆ. ಸಾವಿನ ನಂತರ ಮಾಡಬೇಕಾದ ಕ್ರಿಯೆಗಳನ್ನು ಮೊದಲೇ ಮಾಡಿ ಮುಗಿಸಿದ್ದೇನೆ.

ದೇಶದ ಜನರ ಹಿತಾಸಕ್ತಿ ಮತ್ತು ಸಾಮಾಜಿಕ ಹಿತದೃಷ್ಟಿಯಿಂದ ಈ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಬೇಕು ಎಂದು ನಾನು ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮುಂದೆ ಬೇಡಿಕೆ ಇಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

Join Whatsapp