ಮುಡಾ ಹಗರಣ ಸಾಬೀತಾದರೆ, ಬೊಮ್ಮಾಯಿ ಜೈಲಿಗೆ ಹೋಗಬೇಕಾಗುತ್ತದೆ: ಚಲುವರಾಯಸ್ವಾಮಿ

Prasthutha|

ಮಂಡ್ಯ: ’ಮೈಸೂರಿನ ’ಮುಡಾ’ ಹಗರಣಕ್ಕೂ ಸಿದ್ದರಾಮಯ್ಯನವರಿಗೂ ಸಂಬಂಧವೇ ಇಲ್ಲ. ಹಗರಣ ನಡೆದಿರುವುದು ಸಾಬೀತಾದರೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅಂದಿನ ಮುಡಾ ಅಧ್ಯಕ್ಷ ಮೊದಲು ಜೈಲಿಗೆ ಹೋಗಬೇಕಾಗುತ್ತದೆ‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 135 ಸ್ಥಾನಗಳನ್ನು ಗೆದ್ದು, ಜನರಿಂದ ಆಯ್ಕೆಯಾಗಿ ಬಂದಿರುವ ‘ಕಾಂಗ್ರೆಸ್ ಸರ್ಕಾರವನ್ನು ತೆಗೀತೀವಿ’ ಎಂದು ಬಿಜೆಪಿ–ಜೆಡಿಎಸ್ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಹೀಗ ಹೇಳುವುದೇ ಕ್ರಿಮಿನಲ್ ಅಪರಾಧ. ಈ ಆರೋಪದಡಿ ಇವರನ್ನು ಜೈಲಿಗೆ ಹಾಕಬಹುದು. ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.



Join Whatsapp