Home ಟಾಪ್ ಸುದ್ದಿಗಳು ಮುಡಾ ಹಗರಣ ಸಾಬೀತಾದರೆ, ಬೊಮ್ಮಾಯಿ ಜೈಲಿಗೆ ಹೋಗಬೇಕಾಗುತ್ತದೆ: ಚಲುವರಾಯಸ್ವಾಮಿ

ಮುಡಾ ಹಗರಣ ಸಾಬೀತಾದರೆ, ಬೊಮ್ಮಾಯಿ ಜೈಲಿಗೆ ಹೋಗಬೇಕಾಗುತ್ತದೆ: ಚಲುವರಾಯಸ್ವಾಮಿ

ಮಂಡ್ಯ: ’ಮೈಸೂರಿನ ’ಮುಡಾ’ ಹಗರಣಕ್ಕೂ ಸಿದ್ದರಾಮಯ್ಯನವರಿಗೂ ಸಂಬಂಧವೇ ಇಲ್ಲ. ಹಗರಣ ನಡೆದಿರುವುದು ಸಾಬೀತಾದರೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅಂದಿನ ಮುಡಾ ಅಧ್ಯಕ್ಷ ಮೊದಲು ಜೈಲಿಗೆ ಹೋಗಬೇಕಾಗುತ್ತದೆ‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 135 ಸ್ಥಾನಗಳನ್ನು ಗೆದ್ದು, ಜನರಿಂದ ಆಯ್ಕೆಯಾಗಿ ಬಂದಿರುವ ‘ಕಾಂಗ್ರೆಸ್ ಸರ್ಕಾರವನ್ನು ತೆಗೀತೀವಿ’ ಎಂದು ಬಿಜೆಪಿ–ಜೆಡಿಎಸ್ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಹೀಗ ಹೇಳುವುದೇ ಕ್ರಿಮಿನಲ್ ಅಪರಾಧ. ಈ ಆರೋಪದಡಿ ಇವರನ್ನು ಜೈಲಿಗೆ ಹಾಕಬಹುದು. ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Join Whatsapp
Exit mobile version