ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲದಿದ್ದರೆ, ರಾಣಿ ಚೆನ್ನಮ್ಮ,ಸಂಗೊಳ್ಳಿ ರಾಯಣ್ಣ ಕೂಡಾ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್ ಅಹಿಂಸಾ

Prasthutha|

ಬೆಂಗಳೂರು: ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದಾದರೆ, ಕಿತ್ತೂರು  ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡಾ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿರುವ ಕರ್ನಾಟಕ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಿದೆ. ಈ ಸಮಿತಿ ಟಿಪ್ಪುವಿನ ಬಗ್ಗೆ ಇರುವ ವೈಭವೀಕರಣಕ್ಕೆ ಕತ್ತರಿ ಹಾಕಿ ಕೆಲ ಶಿಫಾರಸು ಮಾಡಿದೆ.

ಈ ವಿಚಾರ ಚರ್ಚೆಯಾಗುತ್ತಿರುವ ಹೊತ್ತಲ್ಲೇ ನಟ ಚೇತನ್ “ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಸ್ಲಿಂ ಆದ ಯಾವುದೇ ವ್ಯಕ್ತಿಯನ್ನು ಗುರಿಯಾಗಿಸುವುದರ ಮೂಲಕ ನಮ್ಮ ಇತಿಹಾಸಗಳನ್ನು ಹಿಂದುತ್ವಗೊಳಿಸುತ್ತಿದೆ. ಟಿಪ್ಪು ಇನ್ನು ಮುಂದೆ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆಯುವಂತಿಲ್ಲ. ಬ್ರಿಟಿಷರ ವಿರುದ್ಧ ಹೋರಾಡುತ್ತ ಯುದ್ಧ ಭೂಮಿಯಲ್ಲಿ ಮಡಿದ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡಾ ಸ್ವಾತಂತ್ರ್ಯ ಹೋರಾಟಗಾರರಲ್ಲ” ಎಂದು ತನ್ನ ಅಭಿಪ್ರಾಯವನ್ನುಫೇಸ್ಬುಕ್ ನಲ್ಲಿ  ಹಂಚಿಕೊಂಡಿದ್ದಾರೆ.

- Advertisement -

Join Whatsapp