ನಾವು ಅಧಿಕಾರಕ್ಕೆ ಬಂದರೆ “ನಾಗ್ಪುರ ಶಿಕ್ಷಣ ನೀತಿ”ಯನ್ನು ರದ್ದುಗೊಳಿಸಲು ಸಿದ್ದ : ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಭಾರತದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ವಿದೇಶಕ್ಕೆ ಕಲಿಯಲು ಹೋಗಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿದ್ಯಾರ್ಥಿಗಳ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಗ್ಪುರದ ಶಿಕ್ಷಣ ನೀತಿಯನ್ನು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ಅತ್ಯುತ್ತಮವಾಗಿದೆ ಬೇರೆ ದೇಶಗಳಿಂದ ಓದಲು ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ.

ಭಾರತದಲ್ಲಿ ಶಿಕ್ಷಣದ ವೆಚ್ಚ ಹೆಚ್ಚಾಗಿದೆ. ಹಾಗಾಗಿ ಕೆಲವರು ವಿದೇಶಕ್ಕೆ ಓದಲು ಹೋಗುತ್ತಿದ್ದಾರೆ. ಉಕ್ರೇನ್‍ನಲ್ಲಿ ರಷ್ಯಾ ದಾಳಿಗೆ ಮೃತಪಟ್ಟ ನವೀನ್ ಗ್ಯಾನಗೌಡರ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಪಿಯುಸಿಯಲ್ಲಿ ಶೇ.97ರಷ್ಟು ಅಂಕ ಪಡೆದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಕಡಿಮೆ ಅಂಕ ಪಡೆದವರು ವಿದೇಶಕ್ಕೆ ಹೋಗಿದ್ದಾರೆ ಎಂದು ಹೇಳುವ ಮೂಲಕ ವಿದ್ಯಾರ್ಥಿಗಳ ಸ್ವಾಭಿಮಾನ ಕೆಣಕಿದ್ದಾರೆ ಎಂದು ಕಿಡಿಕಾರಿದರು.

Join Whatsapp