ನಮಗೆ ಶಕ್ತಿ ನೀಡಿದರೆ ನಿಮ್ಮ ಹಸುವಿನ ಒಂದೇ ಒಂದು ಹನಿ ರಕ್ತ ಕೆಳಕ್ಕೆ ಬೀಳಲು ಬಿಡುವುದಿಲ್ಲ: ಪ್ರಮೋದ್ ಮುತಾಲಿಕ್

Prasthutha|

ಶಿವಮೊಗ್ಗ: ನಮಗೆ ಬಲ ತುಂಬಿದರೆ ನಿಮ್ಮ ದೇವಸ್ಥಾನ ಉಳಿಸುತ್ತೇವೆ. ನಿಮ್ಮ ಅಕ್ಕ-ತಂಗಿಯರನ್ನು ಉಳಿಸುತ್ತೇವೆ. ನಿಮ್ಮ ಹಸುವಿನ ಒಂದೇ ಒಂದು ಹನಿ ರಕ್ತ ಕೆಳಕ್ಕೆ ಬೀಳಲು ಬಿಡುವುದಿಲ್ಲ. ರಾಜಕಾರಣಿಗಳಿಗೆ ಬಲ ತುಂಬಬೇಡಿ. ಅವರಷ್ಟು ನಿರ್ಲಜ್ಜ, ನೀಚರು ಯಾರು ಇಲ್ಲ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿ ಕಾರಿದರು.

- Advertisement -


‘ಹಿಂದುತ್ವದ ಮುಖವಾಡ ಹೊತ್ತ ರಾಜಕಾರಣಿಗಳಿಗೆ ಧಿಕ್ಕಾರವಿರಲಿ. ರಾಜಕಾರಣಿಗಳು ಯಾವುದೇ ಪಕ್ಷದವರಾಗಿರಲಿ ಅವರಿಗೆ ಧಿಕ್ಕಾರವಿರಲಿ. ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ? ಹಿಂದುತ್ವದ ಮುಖವಾಡ ಹಾಕಿಕೊಂಡು ದೇಶದಲ್ಲಾಗುತ್ತಿರುವ ಅನಾಹುತಗಳಿಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.


‘ದೇವಸ್ಥಾನ ಒಡೆಯುತ್ತೀರಿ , ಸಾರ್ವಜನಿಕ ಗಣೇಶೋತ್ಸವ ಬ್ಯಾನ್ ಮಾಡುತ್ತೀರಿ, ದುರ್ಗಾ ಮಾತೆಯ ವಿಗ್ರಹ ಇಷ್ಟೇ ಇರಬೇಕೆಂದು ಹೇಳುತ್ತೀರಿ. ಸುಪ್ರೀಂ ಕೋರ್ಟ್ ನ ಆರ್ಡರ್ ತೋರಿಸಿ, ದೇವಾಲಯ ಒಡೆಯುತ್ತಿರಿ , ಮಸೀದಿಯ ಮೈಕ್ ಮತ್ತು ಮಸೀದಿ ತೆರವಿಗೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ. ಅದನ್ಯಾಕೆ ತೋರಿಸುವುದಿಲ್ಲಾ ಎಂದು ಎಂದು ಅವರು ಹೇಳಿದ್ದಾರೆ.

Join Whatsapp