ದಕ್ಷಿಣ ಕನ್ನಡದಲ್ಲಿ ಮುಂದುವರಿದ ಅನೈತಿಕ ಗೂಂಡಾಗಿರಿ : ಜಾನುವಾರು ಸಾಗಾಟಗಾರರ ಕೊಲೆ ಯತ್ನ

Prasthutha|

ಬಂಟ್ವಾಳ : ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಸಂಘಪರಿವಾರದ ಐವರು ಕಾರ್ಯಕರ್ತರು, ಜಾನುವಾರು ಸಾಗಿಸುತ್ತಿದ್ದ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.

- Advertisement -

ಸಂಘಪರಿವಾರದ ಕಾರ್ಯಕರ್ತರಾದ ಜಯ ಪ್ರಶಾಂತ, ಲಕ್ಷೀಶ ಹಾಗೂ ಉಳಿದ ಮೂವರು ಹಲ್ಲೆ ನಡೆಸಿದ ಆರೋಪಿಗಳು ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದವರನ್ನು ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ, ಮೂಸಾ, ಕನ್ಯಾನ ನಿವಾಸಿ ಹಮೀದ್ ಹಾಗೂ ಸಾಲೆತ್ತೂರಿನ ಹಮೀದ್ ಎಂದು ಗುರುತಿಸಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್ 15ರಂದು ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ಮತ್ತು ಕಾರಿನಲ್ಲಿ ಬಂದ ಐವರು ಸಂಘಪರಿವಾರದ ಕಾರ್ಯಕರ್ತರು ಜಾನುವಾರು ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ಅಡ್ಡಗಟ್ಟಿ ಅದರಲ್ಲಿದ್ದ ನಾಲ್ವರ ಮೇಲೆ ಬ್ಯಾಟ್ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಹಲ್ಲೆಗೊಳಗಾದ ಮಂಜೇಶ್ವರ ನಿವಾಸಿ ಮೂಸಾ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ 341,307,324,323,506,143,147,148,ಜೊತೆಗೆ 149 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, `ಐದು ಜಾನುವಾರಗಳನ್ನು ಮುಳಿಯ ಎಂಬಲ್ಲಿ ಖರೀದಿಸಿ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ತೆರಳುತ್ತಿದ್ದಾಗ ಆರೋಪಿಗಳಾದ ಜಯ ಪ್ರಶಾಂತ, ಲಕ್ಷೀಶ ಮತ್ತು ಇತರ ಮೂವರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಸಂತ್ರಸ್ತರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, `ಪರವಾನಿಗೆ ಇಲ್ಲದೆ  ಜಾನುವಾರುಗಳನ್ನು ಸಾಗಾಟ ಮಾಡಿದ್ದಕ್ಕೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ, ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Join Whatsapp