ದಟ್ಟ ಅರಣ್ಯದಲ್ಲಿ ಅಕ್ರಮ ಗಣಿಗಾರಿಕೆ | ಗುಹೆಯ ಮೇಲ್ಛಾವಣಿ ಕುಸಿದು ನಾಲ್ವರು ಸಾವು

Prasthutha|

ಕೊಡೆರ್ಮಾ : ಅಕ್ರಮ ಗಣಿಗಾರಿಕೆಯ ಗುಹೆಯ ಮೇಲ್ಛಾವಣಿ ಕುಸಿದು ಜಾರ್ಖಂಡ್ ನ ಕೊಡೆರ್ಮಾ ಜಿಲ್ಲೆಯಲ್ಲಿ ನಾಲ್ವರು ಕಾರ್ಮಿಕರು ಸಾವಿಗೀಡಾಗಿದ್ದಾರೆ.

- Advertisement -

ಮೇಲ್ಛಾವಣಿ ಕುಸಿದಾಗ 6 ಮಂದಿ ಗುಹೆಯೊಳಗೆ ಸಿಲುಕಿದ್ದರು. ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. ಆದರೆ, ಉಳಿದ ನಾಲ್ವರು ಮೃತಪಟ್ಟಿದ್ದಾರೆ ಎಂದು ಡಿಸಿಪಿ ರಮೇಶ್ ಗೋಲಪ್ ತಿಳಿಸಿದ್ದಾರೆ.

ದಟ್ಟ ಅರಣ್ಯದ ನಡುವೆ ಕೆಲವರು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿರುವವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಘಟನೆಗೆ ಸಂಬಂಧಿಸಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಓರ್ವನನ್ನು ಬಂಧಿಸಲಾಗಿದೆ.

Join Whatsapp