Home ಕರಾವಳಿ ಮಂಗಳೂರಿನಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ

ಮಂಗಳೂರಿನಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ

ಮಂಗಳೂರು: ಮಂಗಳೂರಿನ ಹೆಸರಾಂತ ಚಿನ್ನದ ಮಳಿಗೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ತೊಕ್ಕೊಟ್ಟುವಿನ ಬಟ್ಟೆ ಮಳಿಗೆಯಲ್ಲಿ ಕೆಲಸದಲ್ಲಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯ ಜೊತೆ ಮಾತನಾಡುತ್ತಿದ್ದುದನ್ನು ಕಂಡು ಸ್ಥಳೀಯ ಭಜರಂಗದಳದ ಕಾರ್ಯಕರ್ತರು ಯುವಕನಿಗೆ ಎಚ್ಚರಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ತೊಕ್ಕೊಟ್ಟು ಸಾಗರ್ ಕಲೆಕ್ಷನ್ಸ್ ಬಟ್ಟೆ ಮಳಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲಿಯಾರ್ ಪದವು ನಿವಾಸಿ ಮುನೀರ್ ಎಂಬಾತ, ಅದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಹಿಂದೂ ಯುವತಿಯ ಜೊತೆಗೆ ಆಕೆಯ ಮನೆಯ ಹತ್ತಿರ ಮಾತನಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಸ್ಥಳದಲ್ಲಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಗಮನಿಸಿ ಕೂಡಲೇ ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಯುವಕನಿಗೆ ಎಚ್ಚರಿಕೆ ನೀಡಿದ್ದಾರೆ.

ಇಬ್ಬರನ್ನು ಬಂಧಿಸಿದ ಉಳ್ಳಾಲ ಪೊಲೀಸರು ಬಳಿಕ ವಿಚಾರಣೆ ನಡೆಸಿ ಬಿಟ್ಟುಬಿಟ್ಟಿದ್ದಾರೆ.

Join Whatsapp
Exit mobile version