ಪರಿಸರ ಉಳಿಯಲು ಕಸ್ತೂರಿ ರಂಗನ್ ವರದಿ ಜಾರಿ ಅನಿವಾರ್ಯ: ಸಿ.ಪಿ.ಮುತ್ತಣ್ಣ

Prasthutha|

ಮಡಿಕೇರಿ: ‘ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ವಿರೋಧಿಸುವುದು ಸರಿಯಲ್ಲ’ ಎಂದು ಪರಿಸರ ಮತ್ತು ಆರೋಗ್ಯ ಫೌಂಡೇಷನ್‌ನ ಕಾರ್ಯದರ್ಶಿ ಕರ್ನಲ್ ಸಿ.ಪಿ.ಮುತ್ತಣ್ಣ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ನಕಾರಾತ್ಮಕ ಅಂಶಗಳನ್ನು ತೆಗೆದು ಸಕಾರಾತ್ಮಕ ಅಂಶಗಳನ್ನು ಉಳಿಸಿಕೊಂಡು ಅಧಿಸೂಚನೆ ಜಾರಿಗೊಳಿಸಬೇಕು ಎಂದು ಹೇಳಿದರು.

‘ಪರಿಸರ ಉಳಿಯಬೇಕಾದರೆ ಕಸ್ತೂರಿ ರಂಗನ್ ವರದಿ ಜಾರಿಗೆ ಬರಲೇಬೇಕು. ರೈತರೇ ಬೆಳೆಸಿರುವ ಮರಗಳಿಗೆ ನಿಗದಿತ ಸಹಾಯಧನ ಕೊಡಬೇಕು ಎಂದು ವರದಿಯಲ್ಲಿದೆ. ಈ ಅಂಶ ಕರಡು ಅಧಿಸೂಚನೆಯಲ್ಲಿ ಇಲ್ಲ. ಜಿಲ್ಲೆಯ ಬೆಳೆಗಾರರಿಗೆ ಅನುಕೂಲವಾಗುವಂತಹ ಅಂಶಗಳನ್ನು ಸೇರಿಸಿ ಅಧಿಸೂಚನೆಯನ್ನು ಜಾರಿಗೆ ತರಬೇಕು’ ಎಂದು ಅವರು ಆಗ್ರಹಿಸಿದರು.

Join Whatsapp