Home ಟಾಪ್ ಸುದ್ದಿಗಳು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ನವದೆಹಲಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಕೆಂದ್ರ ಚುನಾವಣಾ ಆಯೋಗ ಮಹತ್ವದ ಹೇಳಿಕೆ ನೀಡಿದೆ. ಒಂದು ದೇಶ, ಒಂದೇ ಚುನಾವಣೆʼ ನಿಜಕ್ಕೂ ಉತ್ತಮ ಸಲಹೆಯಾಗಿದೆ. ಆದರೆ ಇದಕ್ಕೆ ಸಂವಿಧಾನದಲ್ಲಿ ಬದಲಾವಣೆಯ ಅಗತ್ಯವಿದೆ. ಇದನ್ನು ಸಂಸತ್ತಿನಲ್ಲಿ ನಿರ್ಧರಿಸಬೇಕು. ಚುನಾವಣಾ ಆಯೋಗವು ಸಂಪೂರ್ಣ ಸನ್ನದ್ಧವಾಗಿದ್ದು ಏಕಕಾಲದಲ್ಲಿ ಚುನಾವಣೆಯನ್ನು ನಡೆಸಲು ಸಮರ್ಥವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

ಸಂವಿಧಾನದ ಪ್ರಕಾರ ಎಲ್ಲಾ ಚುನಾವಣೆಗಳು ಏಕಕಾಲದಲ್ಲಿ ನಡೆಯಬೇಕು. ಸ್ವಾತಂತ್ರ್ಯ ಬಂದಾಗಿನಿಂದ ನಡೆಯುತ್ತಿರುವ ಸಂಸತ್ ಚುನಾವಣೆಗಳು ಎಲ್ಲಾ ಮೂರು ಚುನಾವಣೆಗಳು ಏಕಕಾಲದಲ್ಲಿ ನಡೆಯಬೇಕು. ಕೆಲವೊಮ್ಮೆ ವಿಧಾನಸಭಾ ವಿಸರ್ಜನೆ, ಕೆಲವೊಮ್ಮೆ ಸಂಸತ್ತಿನಲ್ಲಿ ಗೊಂದಲ ಹೀಗೆ ಕೆಲವು ಸಮಸ್ಯೆಗಳು ಉಂಟಾಗುತ್ತದೆ. ಆದರೆ ರಾಷ್ಟ್ರದ ಹಿತದೃಷ್ಟಿಯಿಂದ ಒಂದು ದೇಶ ಒಂದೇ ಚುನಾವಣೆ ನಿಜಕ್ಕೂ ಉತ್ತಮ ಸಲಹೆಯಾಗಿದೆ. ಆದರೆ ಇದಕ್ಕೆ ಸಂವಿಧಾನದಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಹೇಳಿದರು.

ವಿಧಾನಸಭೆಯಲ್ಲಿ 5 ವರ್ಷಗಳ ಅವಧಿ ಪೂರ್ಣಗೊಳಿಸಲು ಸಾಧ್ಯವಾಗದ ಸರ್ಕಾರಗಳನ್ನು ಸಂವಿಧಾನದ ಅಡಿಯಲ್ಲಿ ವಿಸರ್ಜಿಸಬೇಕೆ ಅಥವಾ ದೇಶದಲ್ಲಿ ಏಕಕಾಲದ ಚುನಾವಣೆಗಾಗಿ ಸಂಸತ್ತಿನ ಅವಧಿಯನ್ನು ಹೆಚ್ಚಿಸಬೇಕೆ ಎಂಬುದನ್ನು ಯೋಚಿಸಬೇಕು. ಆದರೆ ಚುನಾವಣಾ ಆಯೋಗವು ಈ ರೀತಿಯ ಏಕಕಾಲದಲ್ಲಿ ಚುನಾವಣೆ ನಡೆಸಲು ಸಂಪೂರ್ಣ ಸಜ್ಜಾಗಿದೆ ಎಂದು ಹೇಳಿದರು.

Join Whatsapp
Exit mobile version