Home ಟಾಪ್ ಸುದ್ದಿಗಳು ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೇಂದ್ರ ಸರ್ಕಾರ ಮಣಿಪುರದ ಗಲಭೆಗೆ ಆರಂಭದಲ್ಲೇ ಮೂಲ ಕಾರಣಗಳನ್ನು ಹುಡುಕಬೇಕಿತ್ತು. ಅಲ್ಲಿನ ರಾಜ್ಯ ಸರ್ಕಾರವೂ ಆರಂಭದಲ್ಲೇ ಗಲಭೆ ತಡೆಯುವಲ್ಲಿ ವಿಫಲವಾಗಿದ್ದು, ಸಿಎಂ ವೈಫಲ್ಯಗಳು ಎದ್ದು ಕಾಣುತ್ತಿವೆ. ಆದ್ದರಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ವಿಧಾನಪರಿಷತ್ ಸದಸ್ಯರು ಆಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.


ಮಣಿಪುರದ ಗಲಭೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕಿತ್ತು. ಆದರೀಗ ಗಲಭೆ ವಿಕೋಪಕ್ಕೆ ತಿರುಗಿದೆ. ಮಣಿಪುರದ ಜನತೆ ಅಲ್ಲಿನ ಸಿಎಂ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಸಿಎಂ ಬಿರೇನ್ ಸಿಂಗ್ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.


ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿರುವುದು ಪೈಶಾಚಿಕ ಕೃತ್ಯ ನಾನು ಇದನ್ನ ತೀವ್ರವಾಗಿ ಖಂಡಿಸುತ್ತೇನೆ. ಕೇಂದ್ರ ಸರ್ಕಾರ ಬರಿ ಬಾಯಿ ಮಾತಿಗೆ ಕಠಿಣ ಕ್ರಮ ಅನ್ನದೇ ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು.

Join Whatsapp
Exit mobile version