Home ಕರಾವಳಿ ದಿನಬಳಕೆ ಆಹಾರದ ಮೇಲೆ ತೆರಿಗೆ ಹೇರಿಕೆ: ಎಸ್.ಡಿ.ಪಿ.ಐ ಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ದಿನಬಳಕೆ ಆಹಾರದ ಮೇಲೆ ತೆರಿಗೆ ಹೇರಿಕೆ: ಎಸ್.ಡಿ.ಪಿ.ಐ ಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಮೋದಿ ಸರಕಾರದ ಅವೈಜ್ಞಾನಿಕ ಹಾಗೂ ಜನ ವಿರೋಧಿಯಾದ ತೆರಿಗೆ ಹೇರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಸರಕಾರದ ಜಿ.ಎಸ್.ಟಿ ತೆರಿಗೆಯ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ತಕ್ಷಣ ತೆರಿಗೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಲೀಲ್ ಕೆ, ಕಾರ್ಯದರ್ಶಿ ಅಕ್ಬರ್ ರಾಝ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಗಳಾದ ಅನ್ವರ್ ಸಾದತ್ ಬಜತ್ತೂರು, ಸುಹೈಲ್ ಖಾನ್ ಮುಂತಾದ ನಾಯಕರು ಉಪಸ್ಥಿತರಿದ್ದರು

Join Whatsapp
Exit mobile version