ದುಷ್ಕರ್ಮಿಗಳಿಂದ ಧ್ವಂಸಗೊಂಡ ಹಿಂದೂ ದೇವಾಲಯವನ್ನು ಸರ್ಕಾರದ ಖರ್ಚಿನಲ್ಲೇ ಪುನರ್ನಿರ್ಮಾಣ ಮಾಡುತ್ತೇವೆ : ಪಾಕ್ ಪ್ರಧಾನಿ ಇಮ್ರಾನ್ ಖಾನ್

Prasthutha|

ಪೊಲೀಸ್ ನಿರ್ಲಕ್ಷ್ಯದ ಕುರಿತು ಛೀಮಾರಿ ಹಾಕಿದ ಪಾಕ್ ಸುಪ್ರೀಮ್ ಕೋರ್ಟ್

- Advertisement -

ಲಾಹೋರ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ದುಷ್ಕರ್ಮಿಗಳ ಗುಂಪೊಂದು ಹಿಂದೂ ದೇವಾಲಯದ ಮೇಲೆ ನಡೆದ ದಾಳಿಯನ್ನು ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಖಂಡಿಸಿದ್ದಾರೆ. ಅದೇ ರೀತಿ ದುಷ್ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಅಪರಾಧಿಗಳನ್ನು ಬಂಧಿಸಲಾಗುವುದು ಮತ್ತು ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ನಿನ್ನೆ ಭೋಂಗ್ ಎಂಬಲ್ಲಿನ ಗಣೇಶ ಮಂದಿರದ ಮೇಲೆ ದಾಳಿ ನಡೆದಿತ್ತು. ಘಟನೆಯ ಕುರಿತಂತೆ ಗುರುವಾರ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ಇಮ್ರಾನ್ ಖಾನ್ ಅವರು, ಈ ಸಂಬಂಧ ಪಂಜಾಬ್ ನ ಪೊಲೀಸ್ ಐಜಿ ಅವರೊಂದಿಗೆ ಮಾತನಾಡಿ ಎಲ್ಲಾ ಅಪರಾಧಿಗಳ ಬಂಧನವನ್ನು ಖಚಿತಪಡಿಸುವಂತೆ ಸೂಚಿಸಿದ್ದೇನೆ. ಮಾತ್ರವಲ್ಲದೆ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿದ್ದೇನೆ. ಸರ್ಕಾರದ ವತಿಯಿಂದ ಮಂದಿರದ ಪುನರ್ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಿದೆಯೆಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

- Advertisement -

ಪಂಜಾಬ್ ಪ್ರಾಂತ್ಯದ ರಹೀಮ್ ಯಾರ್ ಖಾನ್ ಜಿಲ್ಲೆಯ ಭೋಂಗ್ ಎಂಬಲ್ಲಿನ ಹಿಂದೂ ದೇವಾಲಯ ಮೇಲಿನ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಇಮ್ರಾನ್ ವಿರುದ್ಧ ದೇಶದಾದ್ಯಂತ ವ್ಯಾಪಕ ಟೀಕಾಪ್ರಹಾರಗಳು ಭುಗಿಲೆದ್ದಿದೆ. ಮಾತ್ರವಲ್ಲದೆ ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ಭಾರತ ಕೂಡಾ ಪಾಕಿಸ್ತಾನವನ್ನು ಒತ್ತಾಯಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಗುಲ್ಜಾರ್ ಅಹ್ಮದ್ ಅವರು, ಪಂಜಾಬ್ ಪ್ರಾಂತ್ಯದ ಪೊಲೀಸರಿಗೆ ಛೀಮಾರಿ ಹಾಕಿದ್ದಾರೆ. ಮಾತ್ರವಲ್ಲದೆ ದುಷ್ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ವರದಿ ಒಪ್ಪಿಸುವಂತೆ ಸೂಚಿಸಿದ್ದಾರೆ.

Join Whatsapp