ಮುಸ್ಲಿಮ್ ವ್ಯಾಪಾರಿಗೆ ಜೈ ಶ್ರೀರಾಮ್ ಕೂಗಲು ಬೆದರಿಸಿ ಸಂಘಪರಿವಾರದಿಂದ ಹಲ್ಲೆ

Prasthutha|

ಲಕ್ನೋ: ಅಲಿಘಡದಲ್ಲಿ ಮುಸ್ಲಿಮ್ ವ್ಯಾಪಾರಿಯೊಬ್ಬರಿಗೆ ಜೈ ಶ್ರೀರಾಮ್ ಕೂಗುವಂತೆ ಬೆದರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆತನ ಬಳಿಯಿದ್ದ ಮೊಬೈಲ್, ನಗದು ಲೂಟಿ ಮಾಡಿರು ಘಟನೆ ನಡೆದಿದೆ.

- Advertisement -

ಮಾತ್ರವಲ್ಲ ಬೈಕಿಗೆ ಬೆಂಕಿಹಚ್ಚುವ ಪ್ರಯತ್ನ ಕೂಡ ನಡೆದಿದೆ ಎಂದು ಆತ ಆರೋಪಿಸಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಈ ಮಧ್ಯೆ ಮುಸ್ಲಿಮ್ ವ್ಯಾಪಾರಿಗೆ ಹಲ್ಲೆ ನಡೆಸಿದ ಪ್ರಕರಣವು ಗಂಭೀರ ಸ್ವರೂಪ ಪಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ತನಿಖಾಧಿಕಾರಿಯೊಬ್ಬರು, ಟ್ವೀಟ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ನಡೆಸಿ ಪ್ರಕರಣವನ್ನು ದಾರಿ ತಪ್ಪಿಸಬಾರದು. ಬಟ್ಟೆ ವ್ಯಾಪಾರಕ್ಕೆ ಸಂಬಂಧಿಸಿ ಎರಡು ಕಡೆಯವರ ನಡುವೆ ವಾಗ್ವಾದ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ, ರಾಜು ಮತ್ತು ಆತನ ಮಗ ದೇವೇಶ್ ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತನಿಖಾಧಿಕಾರಿಯ ಪ್ರತಿಕ್ರಿಯಿಗೆ ಆಕ್ಷೇಪ ವ್ಯಕ್ತಪಡಿಸಿದ ಸಂತ್ರಸ್ತ ಯುವಕ, ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ನನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪೊಲೀಸರ ನಡೆಯನ್ನು ನೆಟ್ಟಿಗರು ಖಂಡಿಸಿದ್ದಾರೆ.



Join Whatsapp