ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ದಾಖಲಾಗಿರುವ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ.20ಕ್ಕೂ ಹೆಚ್ಚು ಪ್ರಕರಣಗಳು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಹೇಳಿದ್ದಾರೆ.

- Advertisement -

ಶಿಕ್ಷಣದ ಕೊರತೆಯಿರುವ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಂದ ಬಂದವರಿಂದ ಹೆಚ್ಚಿನ ಅಪರಾಧ ಪ್ರಕರಣಗಳು ವರದಿಯಾಗುತ್ತಿರುವುದು ಗಮನಾರ್ಹ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್‌ಕೆಸಿಸಿಐ) ಆಯೋಜಿಸಿದ್ದ ‘ಸೈಬರ್‌ ಭದ್ರತೆ- ಆರ್ಟಿಫಿಶಿಯಲ್​ ಪ್ರಾಮುಖ್ಯತೆಯ ಸಂಭಾವ್ಯತೆ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಸರ್ಕಾರದ ಖಾತರಿ ಯೋಜನೆಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹೆಸರಿನಲ್ಲಿ ನಕಲಿ ಆ್ಯಪ್‌ಗಳನ್ನು ಸೃಷ್ಟಿಸಲಾಗಿದೆ. ಮತ್ತು ಅಂತಹ ಆ್ಯಪ್‌ಗಳ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

- Advertisement -

ಸೈಬರ್‌ಬುಲ್ಲಿಂಗ್, ಟ್ರೋಲಿಂಗ್, ಸೇಡು ತೀರಿಸಿಕೊಳ್ಳುವ ಅಶ್ಲೀಲತೆ, ಸ್ಕಿಮ್ಮಿಂಗ್, ಫಿಶಿಂಗ್ ಮತ್ತು ಇತರವುಗಳಲ್ಲಿ ಅಡಿಯಲ್ಲಿ ಸುಮಾರು 45 ವಿಧದ ಸೈಬರ್‌ ಪ್ರಕರಣಗಳು ವರದಿಯಾಗಿವೆ. ಕಾಲೇಜು ಬಿಟ್ಟವರು, ಉತ್ತರ ಕರ್ನಾಟಕದಂತಹ ಪ್ರದೇಶಗಳ ನಿರುದ್ಯೋಗಿ ಯುವಕರು ಸೈಬರ್ ಅಪರಾಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸೈಬರ್ ಅಪರಾಧಗಳಲ್ಲಿ ಶ್ರೀಮಂತರು ಮಾತ್ರವಲ್ಲದೆ ಬಡವರು ಕೂಡ ಗುರಿಯಾಗುತ್ತಾರೆ ಎಂದರು.

ಸುಮಾರು 70 ಪ್ರತಿಶತ ಪ್ರಕರಣಗಳು ಪತ್ತೆಯಾಗಿವೆ. ಸೈಬರ್ ಅಪರಾಧವನ್ನು ನಿಭಾಯಿಸುವಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಆದರೆ ಇನ್ನೂ ಹೆಚ್ಚಿನ ಸುಧಾರಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

Join Whatsapp