ಸಚಿವ ಈಶ್ವರಪ್ಪ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ: ಇಬ್ಬರು ಖದೀಮರು ಅರೆಸ್ಟ್

Prasthutha|

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರ ಆಪ್ತ ಕಾರ್ಯದರ್ಶಿಗಳು ಎಂದು ಹೇಳಿಕೊಂಡು ಇಬ್ಬರು ಉದ್ಯಮಿಗಳಿಗೆ ಲಕ್ಷಾಂತರ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ.

- Advertisement -


ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಈಶ್ವರಪ್ಪ ಹೆಸರು ಹೇಳಿಕೊಂಡು ಲೋನ್ ಕೊಡಿಸುವುದಾಗಿ ನಂಬಿಸಿ ಮೈಸೂರಿನ ಉದ್ಯಮಿ ಮತ್ತು ಸಾಗರದ ಗುತ್ತಿಗೆದಾರನಿಂದ 36 ಲಕ್ಷ ರೂ. ಪಡೆದು ಖದೀಮರು ವಂಚಿಸಿದ್ದಾರೆ. ಈ ಕುರಿತು ವಂಚನೆಗೊಳಗಾದವರು ದೂರು ನೀಡಿದ ಹಿನ್ನೆಲೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.


ಸದ್ಯಕ್ಕೆ ಇಬ್ಬರನ್ನು ಬಂಧಿಸಿದ್ದೇವೆ. ಇನ್ನುಳಿದ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

Join Whatsapp