Home ಕರಾವಳಿ SDPI ನಿರ್ಮಿಸಿದ ಹರೇಕಳ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ

SDPI ನಿರ್ಮಿಸಿದ ಹರೇಕಳ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ

ಹರೇಕಳ : ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಹರೇಕಳ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಬಸ್ ತಂಗುದಾಣ ಉದ್ಘಾಟನಾ ಸಮಾರಂಭ ಮತ್ತು ಸಾರ್ವಜನಿಕ ಸಮಾವೇಶ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಐಕು, ಮಿಷನ್ ಕಂಪೌಂಡ್’ನಲ್ಲಿ ನಡೆಯಿತು.


ಕಾರ್ಯಕ್ರಮಕ್ಕೆ ದುವಾ ಮೂಲಕ ಚಾಲನೆ ನೀಡಿ ಮಾತನಾಡಿದ ಅಸ್ಸಯ್ಯದ್ ಶರಫುದ್ದೀನ್ ಅಲ್ ಹೈದ್ರೋಸ್ ತಂಙಳ್’ರವರು ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣವು, ಯಾವುದೇ ಇನ್ನಿತರ ಚಟುವಟಿಕೆಗಳಿಗೆ ಬಳಕೆಯಾಗದೇ, ಕೇವಲ ಬಸ್ ಕಾಯುವ ಉದ್ದೇಶಕ್ಕಾಗಿ ಸಾರ್ವಜನಿಕವಾಗಿ ಉಪಯೋಗವಾಗಲಿ ಎಂದು ಶುಭ ಹಾರೈಸಿದರು.
ಬಸ್ ತಂಗುದಾಣವನ್ನು ಉದ್ಘಾಟನೆ ಮಾಡಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಸ್’ಡಿಪಿಐ ರಾಷ್ಟೀಯ ಕಾರ್ಯದರ್ಶಿ ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್’ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆಯವರು, ಎಸ್’ಡಿಪಿಐ ಹರೇಕಳ ಇದರ ಪಧಾದಿಕಾರಿಗಳು ಮತ್ತು ಕಾರ್ಯಕರ್ತರ ಸಾಮಾಜಿಕ ಸೇವೆಯ ಭಾಗವಾಗಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿದ್ದು, ಇದು ಈ ಭಾಗದ ಪ್ರತಿಯೊಂದು ಜನ ಸಾಮಾನ್ಯರಿಗೂ ಉಪಯುಕ್ತವಾಗಲಿ ಮತ್ತು ಇನ್ನಷ್ಟು ಸಮಾಜ ಸೇವೆ ಮಾಡಲು ಸರ್ವಶಕ್ತನು ಅನುಗ್ರಹಿಸಲಿ ಎಂದರು.


ಪ್ರಸಕ್ತ ಸನ್ನಿವೇಶದಲ್ಲಿ ನಾವು ರಾಜಕೀಯವಾಗಿ ಶಕ್ತಿಯುತಗೊಂಡು, ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಹೋರಾಟ ನಡೆಸಿಕೊಂಡು ದಮನಿತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಜನ ಸಾಮಾನ್ಯರ ದ್ವನಿಯಾಗಿ ವಿಧಾನಸಭೆಗೆ ಪ್ರವೇಶಿಸುವುದು ಅನಿವಾರ್ಯವಾಗಿದೆ ಮತ್ತು ಅದಕ್ಕಾಗಿ ನಾವು ಇನ್ನಷ್ಟು ಸಮಾಜಮುಖಿ ಕೆಲಸ ಮಾಡುತ್ತ ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಹರೇಕಳ ಹಾಜಬ್ಬ, ತ್ವಾಹ ಜುಮಾ ಮಸ್ಜಿದ್ ಇದರ ಖತೀಬ್ ಟಿ. ಎಚ್ ಝೈನುದ್ದೀನ್ ಸಖಾಫಿ, ಎಸ್’ಡಿಪಿಐ ಮಂಗಳೂರು ಕ್ಷೇತ್ರ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ, ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಮಂಚಿ, ಸಲಾಮ್ ವಿದ್ಯಾನಗರ, ಪಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನ್ಸಾರ್ ಇನೋಳಿ, RJM ಫರೀದ್ ನಗರ ಅಧ್ಯಕ್ಷ ಶಾಹುಲ್ ಹಮೀದ್, ಉದ್ಯಮಿ A.B ಅಕ್ಬರ್ ಆಲಿ, SYS ನ್ಯೂಪಡ್ಪು ಅಧ್ಯಕ್ಷ ಕಬೀರ್, ಹರೇಕಳ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಬಸೀರ್ SM, ಪಾವೂರು ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಇನೋಳಿ, ಎಸ್’ಡಿಪಿಐ ಹರೇಕಳ ಕಾರ್ಯದರ್ಶಿ ಇಬ್ರಾಹಿಂ, ಎಸ್’ಡಿಪಿಐ RG ನಗರ ಬೂತ್ ಅಧ್ಯಕ್ಷ ಶಾಜುದ್ದೀನ್ ಉಪಸ್ಥಿತಿಯಿದ್ದರು.


ಎಸ್’ಡಿಪಿಐ ಹರೇಕಳ ಗ್ರಾಮ ಸಮಿತಿ ಅಧ್ಯಕ್ಷ ಮುಹಮ್ಮದ್ ಆಸೀಫ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು, ಎಸ್’ಡಿಪಿಐ ಹರೇಕಳ ಕಾರ್ಯದರ್ಶಿ ಅಬ್ದುಲ್ ರಶೀದ್ ಎಚ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Join Whatsapp
Exit mobile version