Home ಕರಾವಳಿ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಗ್ರಾಮ‌ ಪಂಚಾಯತ್ ಸದಸ್ಯನನ್ನು ಭೇಟಿಯಾದ ಇನಾಯತ್ ಅಲಿ

ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಗ್ರಾಮ‌ ಪಂಚಾಯತ್ ಸದಸ್ಯನನ್ನು ಭೇಟಿಯಾದ ಇನಾಯತ್ ಅಲಿ

ಮಂಗಳೂರು: ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಗ್ರಾಮ‌ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡರಾದ ನೂರ್ ಮೊಹಮ್ಮದ್ ರವರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಶೀಘ್ರವೇ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ನಿನ್ನೆ(ಶನಿವಾರ) ತನ್ನ ಮೇಲೆ ಬಿಜೆಪಿ ಕಾರ್ಯಕರ್ತರಾದ ರಾಜೇಶ್ ಸಾಲ್ಯಾನ್, ರಾಘವೇಂದ್ರ ಆಚಾರಿ ಎಂಬವರು ರಾಡ್’ನಿಂದ ಹಲ್ಲೆ ನಡೆಸಿ ಬಳಿಕ‌ ಕೊಲೆ ಬೆದರಿಕೆ ಹಾಕಿರುವುದಾಗಿ ಪಡು ಪೆರೆರಾ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಆರೋಪ ಮಾಡಿದ್ದರು.

ಹಲ್ಲೆಗೊಳಾಗಾದ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version