ಬಸ್ ಅಪಘಾತ: 7ಮಂದಿ ಸಾವು, ಹಲವರು ಗಂಭೀರ

Prasthutha|

ತಿರುಪತಿ: ಮದುವೆ ಸಮಾರಂಭಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಪ್ರಪಾತಕ್ಕೆ ಬಿದ್ದು, ಏಳು ಜನರು ಸಾವನ್ನಪ್ಪಿ, 45 ಜನರು ಗಾಯಗೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‌ ನಲ್ಲಿ ಶನಿವಾರ ರಾತ್ರಿ ನಡೆದಿದೆ.

- Advertisement -

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.

ಖಾಸಗಿ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ 52 ಜನರನ್ನು ಹೊತ್ತೊಯ್ಯುತ್ತಿತ್ತು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬಸ್ ಕಣಿವೆಗೆ ಬಿದ್ದಿದೆ.

- Advertisement -

ಪೊಲೀಸರು, ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.



Join Whatsapp