Home ಟಾಪ್ ಸುದ್ದಿಗಳು ಬಸ್ ಅಪಘಾತ: 7ಮಂದಿ ಸಾವು, ಹಲವರು ಗಂಭೀರ

ಬಸ್ ಅಪಘಾತ: 7ಮಂದಿ ಸಾವು, ಹಲವರು ಗಂಭೀರ

ತಿರುಪತಿ: ಮದುವೆ ಸಮಾರಂಭಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಪ್ರಪಾತಕ್ಕೆ ಬಿದ್ದು, ಏಳು ಜನರು ಸಾವನ್ನಪ್ಪಿ, 45 ಜನರು ಗಾಯಗೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‌ ನಲ್ಲಿ ಶನಿವಾರ ರಾತ್ರಿ ನಡೆದಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.

ಖಾಸಗಿ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ 52 ಜನರನ್ನು ಹೊತ್ತೊಯ್ಯುತ್ತಿತ್ತು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬಸ್ ಕಣಿವೆಗೆ ಬಿದ್ದಿದೆ.

ಪೊಲೀಸರು, ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Join Whatsapp
Exit mobile version