ಮರಾಠ ಸಮುದಾಯವನ್ನು 2 ಎಗೆ ಸೇರ್ಪಡೆ ಮಾಡಿ: ಸಚಿವ ಪ್ರಭು ಚೌಹಾಣ್

Prasthutha|

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿಗೆ ಎಲ್ಲೆಡೆಯಿಂದ ಬೇಡಿಕೆ ಬರುತ್ತಿದ್ದು, ಮರಾಠ ಮೀಸಲಾತಿಯನ್ನು 2 ಎಗೆ ಸೇರ್ಪಡೆ ಮಾಡುವಂತೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಪ್ರಮುಖ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ಅವರು ಕೈಗೊಂಡಿದ್ದಾರೆ. ಸುಮಾರು 4 ದಶಕಗಳಲ್ಲಿ ಈ ಬೇಡಿಕೆ ಇತ್ತು. ಅದನ್ನು ಈಡೇರಿಸಲಾಗಿದೆ. ಅವರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ತಿಳಿಸಿದರು.

ಗೋಶಾಲೆಗಳ ಸಂಬಂಧ 100 ಕೋಟಿ ಅನುದಾನ ನೀಡಲಾಗಿದೆ ಎಂದ ಅವರು ತಮ್ಮ ಸಚಿವಾಲಯದ ಮೂಲಕ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Join Whatsapp