ಲೋಕಸಭೆ ಚುನಾವಣೆಗಾಗಿ ಅಪೂರ್ಣ ರಾಮಮಂದಿರ ಲೋಕಾರ್ಪಣೆ: ಕಾಂಗ್ರೆಸ್

Prasthutha|

ನವದೆಹಲಿ: ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಅಯೋಧ್ಯೆಯಲ್ಲಿ ಅಪೂರ್ಣ ರಾಮಮಂದಿರವನ್ನು ಲೋಕಾರ್ಪಣೆ ಮಾಡಲು ಹೊರಟಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

- Advertisement -


ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕರಾದ ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ, ಜ್ಯೋತಿರ್ ಮಠದ ಮುಖ್ಯಸ್ಥ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಸಮಾರಂಭಕ್ಕೆ ಹಾಜರಾಗಲು ನಿರಾಕರಿಸಿದ್ದನ್ನು ಉಲ್ಲೇಖಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಭಗವಾನ್ ರಾಮನ ಮೂರ್ತಿಯ ಪ್ರತಿಷ್ಠಾಪನೆ ಧಾರ್ಮಿಕ ವಿಧಾನಗಳಿಗೆ ಅನುಗುಣವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.


ನಾಲ್ವರು ಶಂಕರಾಚಾರ್ಯರು (ಧಾರ್ಮಿಕ ಮುಖಂಡರು) ಅಪೂರ್ಣ ದೇವಾಲಯದಲ್ಲಿ ಪಟ್ಟಾಭಿಷೇಕವನ್ನು ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. “ನನ್ನ ಮತ್ತು ನನ್ನ ದೇವರ ನಡುವೆ ರಾಜಕೀಯ ಪಕ್ಷದ ಕಾರ್ಯಕರ್ತರು ಮಧ್ಯವರ್ತಿಗಳಾಗುವುದನ್ನು ನಾನು ಏಕೆ ಸಹಿಸಿಕೊಳ್ಳುತ್ತೇನೆ?” ಎಂದು ಅವರು ಪ್ರಶ್ನಿಸಿದ್ದಾರೆ.
ರಾಮ ಮಂದಿರಕ್ಕೆ ಉದ್ಘಾಟನೆ ಬಳಿಕ ಕಾಂಗ್ರೆಸ್ ಪಕ್ಷದ ನಾಯಕರು ಭೇಟಿ ನೀಡಲಿದ್ದಾರೆ ಎಂದು ಪವನ್ ಖೇರಾ ಹೇಳಿದ್ದಾರೆ.

Join Whatsapp