ಪಡಿತರ ವಿತರಕರಿಗೆ ಕಮಿಷನ್ ಹೆಚ್ಚಳ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಪಡಿತರ ವಿತರಕರಿಗೆ ಪ್ರತಿ ಕೆ.ಜಿ ಅಕ್ಕಿಗೆ ನೀಡುವ ಕಮಿಷನ್‌ ಮೊತ್ತವನ್ನು ರೂ. 1.50ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಅರಮನೆ ಮೈದಾನದಲ್ಲಿ ಆಹಾರ ಇಲಾಖೆ ಆಯೋಜಿಸಿದ್ದ ‘ಅನ್ನಭಾಗ್ಯ’ ದಶಮಾನೋತ್ಸವ ಹಾಗೂ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಮಾವೇಶ ಉದ್ಘಾಟಿಸಿ ಗುರುವಾರ ಅವರು ಮಾತನಾಡಿದರು.

ಪ್ರಸ್ತುತ ಪ್ರತಿ ಕೆ.ಜಿ ಅಕ್ಕಿಗೆ ರೂ. 1.24 ಕಮಿಷನ್ ಇದೆ. ಪಡಿತರ ವಿತರಕರ ಸಮಸ್ಯೆಗಳನ್ನು ಗಮನಿಸಿದ್ದೇನೆ. ಸಚಿವ ಮುನಿಯಪ್ಪ ಅವರೂ ಕಮಿಷನ್ ಹೆಚ್ಚಿಸುವ ಕುರಿತು ಮನವಿ ಮಾಡಿದ್ದರು. ಎಲ್ಲ ಅಂಶಗಳನ್ನು ಪರಿಗಣಿಸಿ ಕಮಿಷನ್‌ ಹೆಚ್ಚಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

- Advertisement -

2013ರ ಬಸವ ಜಯಂತಿಯ ದಿನವೇ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಬಸವಣ್ಣನವರ ದಾಸೋಹದಿಂದ ಪ್ರೇರಿತವಾಗಿ ಅನ್ನಭಾಗ್ಯ ಜಾರಿ ಮಾಡಿದೆ ಎಂದು ದಶಕಗಳ ಹಿಂದಿನ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭ ನೆನಪಿಸಿದರು

Join Whatsapp