ದೇಶದ ಬಡವರು, ಬುಡಕಟ್ಟು ಜನರಿಗಾಗಿ ‘ಇಂಡಿಯಾ’ ಮೈತ್ರಿಕೂಟ ಹೋರಾಟ ನಡೆಸಲಿದೆ: ರಾಹುಲ್ ಗಾಂಧಿ

Prasthutha|

ನವದೆಹಲಿ: ‘ಇಂಡಿಯಾ’ ಮೈತ್ರಿಕೂಟವು ದೇಶದ ಬಡವರಿಗಾಗಿ, ಸೌಲಭ್ಯ ವಂಚಿತರು ಹಾಗೂ ಬುಡಕಟ್ಟು ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

- Advertisement -


ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ವೇಳೆ ದೇಶದ ಜನರ ಹಕ್ಕುಗಳಿಗಾಗಿ ಅವರ ಸಂಕಷ್ಟಗಳಿಗೆ ‘ಇಂಡಿಯಾ’ ಮೈತ್ರಿಕೂಟ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೊರೇನ್ ಅವರಿಗೆ ಶುಭ ಕೋರಿದ್ದಾರೆ. ದೇಶದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ಆರ್ಥಿಕ ಸಬಲೀಕರಣವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ’ಇಂಡಿಯಾ’ ಮೈತ್ರಿಕೂಟ ಒಗ್ಗಟಿನ ಮಂತ್ರ ಜಪಿಸುವ ಮೂಲಕ ಹೋರಾಟ ನಡೆಸಲಿದೆ ಎಂದು ‘ಎಕ್ಸ್‘ನಲ್ಲಿ ತಿಳಿಸಿದ್ದಾರೆ.



Join Whatsapp