ಭಾರತ – ಪಾಕ್ ಟಿ 20 ಪಂದ್ಯವನ್ನು ಮರುಪರಿಶೀಲಿಸಬೇಕು: ಕೇಂದ್ರ ಸಚಿವ ಗಿರಿರಾಜ್ ಸಿಂಗ್

Prasthutha|

ಜೋಧ್ ಪುರ: ಟಿ -20 ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಾಟವನ್ನು ಮರುಪರಿಶೀಲನೆ ನಡೆಸಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

- Advertisement -

ಪ್ರಸಕ್ತ ಭಾರತ – ಪಾಕಿಸ್ತಾನಗಳ ನಡುವಿನ ರಾಜತಾಂತ್ರಿಕ ಸಂಬಂಧ ಉತ್ತಮವಾಗಿರದ ಕಾರಣ ಈ ಪಂದ್ಯಾಟವನ್ನು ಮರುಪರಿಶೀಲನೆ ನಡೆಸಬೇಕಾಗಿದೆ ಎಂದು ಮಾಧ್ಯಮದೊಂದಿಗೆ ಮಾತನಾಡುತ್ತ ಪ್ರತಿಕ್ರಿಯಿಸಿದರು.

ಮುಂಬರುವ ಟಿ 20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡದ ನಡುವೆ ಬಹು ನಿರೀಕ್ಷಿತ ಹೈ ವೊಲ್ಟೇಜ್ ಪಂದ್ಯ ಅಕ್ಟೋಬರ್ 24 ರಂದು ದುಬೈನಲ್ಲಿ ನಡೆಯಲಿದೆ.

- Advertisement -

ಕಳೆದ ಕೆಲವು ದಿನಗಳಿಂದ ಜಮ್ಮು, ಕಾಶ್ಮೀರದಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಮತ್ತು ಹತ್ಯೆಯ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ರಾಜತಾಂತ್ರಿಕ ಸಂಬಂಧದಲ್ಲಿ ಸಮಸ್ಯೆ ಉಂಟಾಗಿದೆ ಎಂದು ಗಿರಿರಾಜ್ ಸಿಂಗ್ ಆರೋಪಿಸಿದರು.

Join Whatsapp