ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಉದ್ವಿಗ್ನತೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಶುಕುವಾರ (ಮೇ.09) ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯನ್ನು ನಡೆಸಿದರು.
ಈ ವೇಳೆ ಹಿರಿಯ ಅಧಿಕಾರಿಗಳು ತುರ್ತು ಸಂದರ್ಭ ನಿರ್ವಹಿಸಲು ವೈದ್ಯಕೀಯ ಸನ್ನದ್ಧತೆಯ ಪ್ರಸ್ತುತ ಸ್ಥಿತಿಯನ್ನು ಸಚಿವರಿಗೆ ತಿಳಿಸಿದರು. ಆಂಬ್ಯುಲೆನ್ಸ್ಗಳ ನಿಯೋಜನೆ, ವೈದ್ಯಕೀಯ ಉಪಕರಣಗಳು, ಔಷಧಿಗಳು, ರಕ್ತದ ಪಾಕೇಟ್ ಮತ್ತು ಅದಕ್ಕೆ ಬೇಕಾದ ವಸ್ತುಗಳ ಪೂರೈಕೆ ಸೇರಿದಂತೆ ವೈದ್ಯಕೀಯ ಸರಬರಾಜುಗಳ ಸಮರ್ಪಕವಾಗಿವೆ ಎಂದು ತಿಳಿಸಿದರು.
ಆಸ್ಪತ್ರೆಗಳಲ್ಲಿನ ಹಾಸಿಗೆಗಳು (ಬೆಡ್), ಐಸಿಯು ಕಾರ್ಯನಿರ್ವಹಣೆ, ಸುಧಾರಿತ ಮೊಬೈಲ್ ಟ್ರಾಮಾ ಕೇರ್ ಸೆಂಟರ್ ಇತ್ಯಾದಿಗಳ ಕುರಿತು ತೆಗೆದುಕೊಂಡ ಕ್ರಮಗಳ ಬಗ್ಗೆ ತಿಳಿಸಿದರು. ಮತ್ತು ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿನ ಅಗತ್ಯ ಔಷಧಗಳ ಲಭ್ಯತೆ, ರಕ್ತ, ಆಮ್ಲಜನಕ, ಆರೈಕೆ ಕಿಟ್ ಗಳು ಸಮರ್ಪಕವಾಗಿವೆ ಎಂದು ಹೇಳಿದರು
ನವದೆಹಲಿಯ ಏಮ್ಸ್ ಮತ್ತು ಇತರ ಕೇಂದ್ರ ಸರ್ಕಾರಿ ಆಸ್ಪತ್ರೆಗಳ ತುರ್ತು ಸಂದರ್ಭವನ್ನು ಎದುರಿಸಲು ವೈದ್ಯರು ಮತ್ತು ದಾದಿಯರು ಸಿದ್ದಗೊಂಡಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ರಾಜ್ಯ ಮತ್ತು ಜಿಲ್ಲಾಡಳಿತ, ಸಶಸ್ತ್ರ ಪಡೆಗಳು ಮತ್ತು ವೈದ್ಯರು, ದಾದಿಯರು, ಅರೆವೈದ್ಯರು, ಖಾಸಗಿ ವಲಯದ ಆಸ್ಪತ್ರೆಗಳು, ದತ್ತಿ ಸಂಸ್ಥೆಗಳು ಇತ್ಯಾದಿಗಳ ಪ್ರಾದೇಶಿಕ ಸಂಘಗಳೊಂದಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ಸಚಿವ ಜೆಪಿ ನಡ್ಡಾ ಸೂಚಿಸಿದರು.
AIIMS, PGIMER, JIPMER ಮತ್ತು ಇತರ ಪ್ರಮುಖ ಆಸ್ಪತ್ರೆಗಳಲ್ಲಿ ವಿಪತ್ತು ಸನ್ನದ್ಧತೆಗಾಗಿ ಮಾಕ್ ಡ್ರಿಲ್ ನಡೆಸಲಾಗಿದೆ. ಹಾಗೇ, ಕೇಂದ್ರ ಮತ್ತು ರಾಜ್ಯಗಳೊಂದಿಗೆ ಸುಲಭ ಸಮನ್ವಯಕ್ಕಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳೊಂದಿಗೆ ಸರಭೆ ಸಭೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿಯವರು ಮಾಹಿತಿ ನೀಡಿದರು.