Home ವಿದೇಶ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಗಳನ್ನು ತಿರಸ್ಕರಿಸಿದ ಭಾರತ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಗಳನ್ನು ತಿರಸ್ಕರಿಸಿದ ಭಾರತ

ನವದೆಹಲಿ: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾದ ಆರೋಪಗಳನ್ನು ಭಾರತ ತಳ್ಳಿ ಹಾಕಿದೆ.


ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತಕ್ಕೆ ಸಾಕ್ಷ್ಮಗಳನ್ನು ಹಂಚಿಕೊಳ್ಳಲಾಗಿದೆ ಎಂಬ ಕೆನಡಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ.


‘ತನ್ನ ನೆಲದಲ್ಲಿ ಪ್ರಜೆಗಳನ್ನು ಗುರಿಯಾಗಿಸಿಕೊಂಡು ರಹಸ್ಯ ಕಾರ್ಯಾಚರಣೆಗಳನ್ನು ನಡೆಸುವ ಚಟುವಟಿಕೆಗಳಲ್ಲಿ ಭಾರತ ತೊಡಗಿಸಿಕೊಂಡಿದೆ’ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪ ಮಾಡಿದ್ದರು. ಆದರೆ ಇದು ಸತ್ಯವಲ್ಲ ಎಂದು ಭಾರತ ತಿರುಗೇಟು ನೀಡಿದೆ.


ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಏಜೆಂಟರ ಪಾತ್ರ ಇರುವುದನ್ನು ಸಾಬೀತುಪಡಿಸುವ ನಂಬಲರ್ಹ ಪುರಾವೆಗಳನ್ನು ಒದಗಿಸಲಾಗಿದೆ ಎಂಬ ಕೆನಡಾದ ಅಧಿಕಾರಿಗಳ ಆರೋಪಗಳನ್ನು ಭಾರತ ನಿರಾಕರಿಸಿರುವುದಾಗಿ ಮೂಲಗಳು ತಿಳಿಸಿವೆ.

Join Whatsapp
Exit mobile version