ಪತಂಜಲಿ ಉತ್ಪನ್ನಗಳನ್ನು ಬಹಿಷ್ಕರಿಸಲು ಭಾರತೀಯರು ಸಿದ್ಧವಾಗಬೇಕು: ಶೈಖಾ ಹಿಂದ್ ಬಿಂತ್ ಫೈಝಲ್ 

Prasthutha|

►”ಸಮಾಜದ ಸುರಕ್ಷತೆಗೆ ಧಕ್ಕೆ ತರುತ್ತಿರುವ ಭಯೋತ್ಪಾದಕರ ಉತ್ಪನ್ನಗಳನ್ನು ಬಹಿಷ್ಕರಿಸಿ”

- Advertisement -

ದುಬೈ: ಬಾಬಾ ರಾಮ್‌ದೇವ್ ಅವರ ಪತಂಜಲಿ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಶಾರ್ಜಾ ರಾಜಮನೆತನದ ಸದಸ್ಯೆ ಶೈಖಾ ಹಿಂದ್ ಬಿಂತ್ ಫೈಝಲ್ ಅಲ್ ಖಾಸಿಮಿ ಕರೆ ನೀಡಿದ್ದಾರೆ.

ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಸಮುದಾಯವನ್ನು ಕೊಲ್ಲಲು ಕರೆ ನೀಡುವವರ ಉತ್ಪನ್ನಗಳನ್ನು ಬಹಿಷ್ಕರಿಸಲು ಮತ್ತು ಅವರನ್ನು ದೇಶದಿಂದ ಹೊರಹಾಕುವಂತೆ ಟ್ವೀಟ್‌ ನಲ್ಲಿ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತೀಯರಿಗೆ ಏನಾಗಿದೆ ಎಂದು ಅರ್ಥವಾಗುತ್ತಿಲ್ಲ, ಸಮಾಜದ ಸುರಕ್ಷತೆಗೆ ಧಕ್ಕೆ ತರುತ್ತಿರುವ ಈ ಭಯೋತ್ಪಾದಕನ ಉತ್ಪನ್ನಗಳನ್ನು ಬಹಿಷ್ಕರಿಸಲು ದೇಶ ಸಿದ್ಧವಾಗಬೇಕು ಎಂದು ಆಗ್ರಹಿಸಿದ್ದಾರೆ.

ಯೋಗ ಶಿಕ್ಷಕರಾಗಿರುವ  ಅವರು ಗೋಮೂತ್ರದಿಂದ ತೊಳೆಯುವ ಉತ್ಪನ್ನಗಳ ಬಗ್ಗೆ ತಿಳಿಯದೆ ಮುಸ್ಲಿಮರು ಖರೀದಿಸುತ್ತಿದ್ದಾರೆ. ಈ ಮೂಲಕ ಆತ ಲಕ್ಷಾಂತರ ಹಣ ಸಂಪಾದಿಸುತ್ತಾನೆ ಎಂದು ಹೇಳಿದ್ದಾರೆ.

Join Whatsapp