ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಮಂಗಳಸೂತ್ರ ಧರಿಸಿದ್ದರು ಅನ್ನೊದರಲ್ಲಿಯೇ ಡೌಟಿದೆ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ

Prasthutha|

ನವದೆಹಲಿ: ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡೊಕೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಮಂಗಳಸೂತ್ರ ಧರಿಸಿದ್ದರು ಅನ್ನೊದರಲ್ಲಿಯೇ ನನಗೆ ಡೌಟಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್‌ ಸಿಂಗ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳೆಯರ ಚಿನ್ನ ಹಾಗೂ ಮಂಗಳಸೂತ್ರವನ್ನು ಕೂಡ ಕಸಿದು‌ ಮುಸ್ಲಿಮರಿಗೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಹೇಳಿದ್ದರು. ಇದಕ್ಕೆ ರಿಯಾಕ್ಟ್‌ ಮಾಡಿದ್ದ ಪ್ರಿಯಂಕಾ ಗಾಂಧಿ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹತ್ಯೆ ಉಲ್ಲೇಖಿಸಿದ್ದರು. ನನ್ನ ತಾಯಿ ಸೋನಿಯಾ ಗಾಂಧಿ ದೇಶಕ್ಕಾಗಿ ಮಂಗಳ ಸೂತ್ರವನ್ನೆ ತ್ಯಾಗ ಮಾಡಿದ್ದಾರೆ. ಅಲ್ಲದೆ, ನನ್ನ ಅಜ್ಜಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೂಡ ಯುದ್ಧದ ಸನ್ನಿವೇಶಗಳಲ್ಲಿ ದೇಶಕ್ಕಾಗಿ ಚಿನ್ನವನ್ನು ದಾನ ಮಾಡಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡುವಾಗ ಗಿರಿರಾಜ್‌ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Join Whatsapp